ಕನ್ನಡ ಉಪನ್ಯಾಸಕನಿಂದ ಯುವತಿಗೆ ಪ್ರೇಮ ಪಾಠ: ಮದುವೆ ಆಗಿದ್ದರೂ ಹಳೇ ವಿದ್ಯಾರ್ಥಿನಿ ಜೊತೆ ಚಕ್ಕಂದ: ಹೆಂಡತಿ‌‌ ಮಕ್ಕಳನ್ನ ಬಿಟ್ಟು ಯುವತಿ ಜೊತೆ ಜಂಪ್: ಸದ್ಯ ಪೊಲೀಸರ ಅತಿಥಿ

ಮುಂದೆ ಗುರಿ ಹಿಂದೆ ಗುರು ಇರಬೇಕು ಎಂಬ ಗಾದೆ ಮಾತಿದೆ. ಪೋಷಕರು ತಮ್ಮ ಮಕ್ಕಳನ್ನು ಶಿಕ್ಷಕರನ್ನ ನಂಬಿ ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜಿಗೆ ಕಳಿಸುತ್ತಾರೆ. ಆದರೆ, ಇಲ್ಲೊಬ್ಬ ಕನ್ನಡ ಉಪನ್ಯಾಸಕ ತಾನು ಪಾಠ ಮಾಡಿದ ವಿದ್ಯಾರ್ಥಿನಿ ಜೊತೆ ಚಕ್ಕಂದ ಆಡಿದ್ದೂ ಅಲ್ಲದೆ, ಆಕೆಯನ್ನ ಕರೆದುಕೊಂಡು ಎಸ್ಕೇಪ್ ಆಗಿ, ಪೊಲೀಸರ ಕೈಗೆ ತಗಲಾಕ್ಕೊಂಡಿದ್ದಾನೆ. ಅಷ್ಟಕ್ಕೂ ಆ ಘಟನೆ ನಡೆದದ್ದು ಎಲ್ಲಿ, ಯಾರೂ ಆ ಉಪನ್ಯಾಸಕ ಎನ್ನುತ್ತೀರಾ ಈ ಸ್ಟೋರಿ ಓದಿ……

ಹೌದು, ಸಾರ್ವಜನಿಕ‌ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ವೇಳೆ, ತಲೆ ತಗ್ಗಿಸಿಕೊಂಡು ಹೋಗುತ್ತಿರುವ ಉಪನ್ಯಾಸಕ, ಈ ಫೋಟೋದಲ್ಲಿ ಕಾಣಿಸುತ್ತಿರುವ ಉಪನ್ಯಾಸಕನ ಹೆಸರು ಪ್ರವೀಣ್…. ಈತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರತಿಷ್ಟಿತ ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಕಳೆದ 15 ವರ್ಷಗಳಿಂದ ಕನ್ನಡ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿದ್ದ. ಜೊತೆಗೆ ಎನ್‌ಸಿಸಿ ಅಧಿಕಾರಿ (ಲೆಫ್ಟಿನೆಂಟ್) ಆಗಿದ್ದ.

ಈ ವೇಳೆ ಮಕ್ಕಳಿಗೆ ಶಿಸ್ತಿನ ಪಾಠ ಹೇಳುತ್ತಿದ್ದ ಈತನೇ ಶಿಸ್ತು ತಪ್ಪಿದ್ದಾನೆ. ತನಗೆ ಮದುವೆ ಆಗಿ ಎರಡು ಮಕ್ಕಳಿದ್ದರೂ ಹೆಂಡತಿಗೆ ಕಿರುಕುಳ ನೀಡಿ, ತನ್ನ ವಿದ್ಯಾರ್ಥಿನಿ ಜೊತೆಯಲ್ಲಿ ಚಕ್ಕಂದ ಆಡಿ ಎಸ್ಕೇಪ್ ಆಗಿದ್ದಾನೆ. ಪೋಲೀಸರು ಬಂಧಿಸುವ ವೇಳೆ ಇಬ್ಬರೂ ನಿದ್ದೆ ಮಾತ್ರೆ ನುಂಗಿ ಹೈಡ್ರಾಮ ಮಾಡಿದ್ದಾರೆ.

ಇನ್ನೂ ಯುವತಿಗೆ ಮದುವೆ ನಿಶ್ಚಯ ಆಗಿತ್ತಂತೆ. ಮದುವೆ ಹತ್ತಿರ ಆಗುತ್ತಿದ್ದಂತೆ ಯುವತಿ ಆಗಸ್ಟ್ 2 ರಂದು ಮನೆ ಬಿಟ್ಟು ಪರಾರಿಯಾಗಿದ್ದಾಳೆ ಎಂದು ಆರೋಪಿಸಿ ಯುವತಿ ಪೋಷಕರು ಭಯಪಟ್ಟು ಮಿಸ್ಸಿಂಗ್ ದೂರನ್ನು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಆದರೆ, ದೂರು ದಾಖಲಿಸಿಕೊಂಡ ಪೊಲೀಸರು ಸೂಕ್ತ ತನಿಖೆ ನಡೆಸಿ, ತನಿಖೆಯಲ್ಲಿ ಈ ಉಪನ್ಯಾಸಕ ಕರೆದುಕೊಂಡು ಹೋಗಿರುವುದು ತಿಳಿದು ಬಂದಿದೆ. ಮೊದಲು ಯುವತಿಯನ್ನು ಕರೆದುಕೊಂಡು ದೆಹಲಿಗೆ ಹೋಗಿದ್ದಾನೆ‌. ನಂತರ ದೂರು ದಾಖಲಾದ ಮೇಲೆ ಬೆಂಗಳೂರಿನ ಎಸ್ಪಿ ಕಚೇರಿಗೆ ಬಂದು ಎಸ್ಪಿ ಮುಂದೆ ಯುವತಿ ಹೇಳಿಕೆ ನೀಡಿದ್ದಾಳೆ. ನಂತರ ಶಿಕ್ಷಕನೊಂದಿಗೆ ಎಸ್ಕೇಪ್ ಆಗಿ ಪೊಲೀಸರಿಗೆ ಚಳ್ಳೆ‌ಹಣ್ಣು ತಿನ್ನಿಸಿದ್ದಾರೆ. ಸ್ನೇಹಿತರ ಹೆಸರ ಮೇಲೆ ದಿನಕ್ಕೆ ಒಂದು ಸಿಮ್ ಬದಲಿಸಿಕೊಂಡು ಪೊಲೀಸರಿಗೆ ಮಾಹಿತಿ ಸಿಗದ ರೀತಿ ಮಾಡಿದ್ದಾನೆ. ಹಲವು ದಿನಗಳ ಕಾರ್ಯಾಚರಣೆ ನಂತರ ಆನೇಕಲ್ ನಲ್ಲಿ ಲಾಡ್ಜ್ ಒಂದರಲ್ಲಿ ಇದ್ದ ಮಾಹಿತಿ ತಿಳಿದ ಮಹಿಳಾ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ನೇತೃತ್ವದ ತಂಡ ಕೂಡಲೇ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನೂ ಶಿಕ್ಷಕನ ಹೆಂಡತಿಗೆ ಎರಡು ಮಕ್ಕಳಿದ್ದು, ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ್ದನಂತೆ. ಅದೇ ರೀತಿ ಬೇರೆ ಯುವತಿಯರಿಗೂ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎಂದು ಹೆಂಡತಿ ಆರೋಪ ಮಾಡಿದ್ದಾರೆ.

ಒಟ್ಟಾರೆ, ಪಾಠ ಹೇಳಿಕೊಟ್ಟ ಶಿಕ್ಷಕನೇ ಯುವತಿಯ ಜೊತೆಯಲ್ಲಿ ಚಕ್ಕಂದವಾಡಿ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದಾನೆ. ಇನ್ನೂ ಘಟನೆ ತಿಳಿಯುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಶಿಕ್ಷಕನನ್ನು ವಜಾ ಮಾಡಿದೆ. ಉಪನ್ಯಾಸಕನನ್ನು ಬಂಧಿಸಿದ ಪೊಲೀಸರು ಯಾವ ರೀತಿ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago