ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಎಂ.ಎಸ್.ಉಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ ಆಸ್ಪತ್ರೆಯಲ್ಲಿ ಭಾನುವಾರ ವಿಧಿವಶರಾಗಿದ್ದಾರೆ.

ಎಂ. ಎಸ್. ಉಮೇಶ್ ಮೈಸೂರಿನಲ್ಲಿ ಏಪ್ರಿಲ್ 22, 1945ರಲ್ಲಿ ಜನಿಸಿದರು. ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ 1948ರಿಂದ ಸಕ್ರಿಯರಾಗಿದ್ದರು.

ಮಕ್ಕಳ ರಾಜ್ಯ, ಭಾಗ್ಯವಂತರು, ಕಿಲಾಡಿ ಜೋಡಿ, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಕಾಮನಬಿಲ್ಲು, ಅಪೂರ್ವ ಸಂಗಮ, ಶೃತಿ ಸೇರಿದಾಗ, ಮೇಘ ಮಂದಾರ, ಆಕಸ್ಮಿಕ, ಸರ್ವರ್ ಸೋಮಣ್ಣ, ಮೇಘಮಾಲೆ, ನನ್ನಾಸೆಯ ಹೂವೆ, ಜಾಕಿ, ರ್ಯಾಂಬೊ, ಮುಸ್ಸಂಜೆ ಮಾತು, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ….

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

2 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

4 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

7 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

22 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago