ಕನ್ನಡ ಜಾಗೃತಿ ವೇದಿಕೆಯ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ.4 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು. ಎಂ ಹೇಳಿದರು.
ನಗರದ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಮಂಜುನಾಥ ದೇವ ಅವರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಕನ್ನಡಪರ ಸಂಘನೆಗಳ ಮುಖಂಡರು, ಕನ್ನಡದ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷ, ಕರ್ನಾಟಕ ಏಕೀಕರಣವಾಗಿ 68 ವರ್ಷ ಹಾಗೂ ಕನ್ನಡ ಜಾಗೃತಿ ವೇದಿಗೆ ಸ್ಥಾಪನೆಯಾಗಿ 30 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಜನಪದ ಕಲಾತಂಡಗಳು ಮತ್ತು ಸ್ತಬ್ಧ ಚಿತ್ರಗಳ ಭವ್ಯ ಮೆರವಣಿಗೆ ಇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶದ ಉದ್ಘಾಟನೆ ನೆರವೇರಿಸಲಿದ್ದಾರೆ. ಕನ್ನಡಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಮಾತನಾಡಿ, ಕನ್ನಡ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಸ್ವಾಭಿಮಾನಿ ಕನ್ನಡಿಗರ ಸಮಾವೇಶದಲ್ಲಿ ತಾಲೂಕಿನ ಕನ್ನಡಾಭಿಮಾನಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು. ನಾವೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು ಎಂ. ಹಾಗೂ ಪದಾಧಿಕಾರಿಗಳು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಉಪಾಧ್ಯಕ್ಷ ರವಿ, ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ, ಮಹಿಳಾ ಮುಖಂಡರಾದ ಅಂಬಿಕಾ ಟಿ, ವಿಶಾಲಾಕ್ಷಿ, ಪಾರ್ವತಿ, ಲಕ್ಷ್ಮಿ, ಚಂದ್ರಕಲಾ, ತಾಲೂಕು ಕಾರ್ಯದರ್ಶಿ ಸುಧಾಕರ್, ಯುವ ಘಟಕದ ಅಧ್ಯಕ್ಷ ತರುಣ್ ಸರ್ಜಾ, ಕಸಬಾ ಅಧ್ಯಕ್ಷ ಗಿರೀಶ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ್, ಚಂದನ್, ರಮೇಶ್, ಜಗದೀಶ್, ಕಾರ್ಮಿಕ ಘಟಕದ ದಿಲ್ ರಾಜ್, ಆಟೋ ಘಟಕದ ರಾಘವ, ವಿದ್ಯಾರ್ಥಿ ಘಟಕದ ಚಂದನ್, ಮುಖಂಡರಾದ ರಾಕಿ, ಕೃಷ್ಣಪ್ಪ ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಜರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…