ಕನ್ನಡ ಜಾಗೃತಿ ವೇದಿಕೆಯ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ.4 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು. ಎಂ ಹೇಳಿದರು.
ನಗರದ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಮಂಜುನಾಥ ದೇವ ಅವರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಕನ್ನಡಪರ ಸಂಘನೆಗಳ ಮುಖಂಡರು, ಕನ್ನಡದ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷ, ಕರ್ನಾಟಕ ಏಕೀಕರಣವಾಗಿ 68 ವರ್ಷ ಹಾಗೂ ಕನ್ನಡ ಜಾಗೃತಿ ವೇದಿಗೆ ಸ್ಥಾಪನೆಯಾಗಿ 30 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಜನಪದ ಕಲಾತಂಡಗಳು ಮತ್ತು ಸ್ತಬ್ಧ ಚಿತ್ರಗಳ ಭವ್ಯ ಮೆರವಣಿಗೆ ಇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶದ ಉದ್ಘಾಟನೆ ನೆರವೇರಿಸಲಿದ್ದಾರೆ. ಕನ್ನಡಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಮಾತನಾಡಿ, ಕನ್ನಡ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಸ್ವಾಭಿಮಾನಿ ಕನ್ನಡಿಗರ ಸಮಾವೇಶದಲ್ಲಿ ತಾಲೂಕಿನ ಕನ್ನಡಾಭಿಮಾನಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು. ನಾವೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು ಎಂ. ಹಾಗೂ ಪದಾಧಿಕಾರಿಗಳು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಉಪಾಧ್ಯಕ್ಷ ರವಿ, ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ, ಮಹಿಳಾ ಮುಖಂಡರಾದ ಅಂಬಿಕಾ ಟಿ, ವಿಶಾಲಾಕ್ಷಿ, ಪಾರ್ವತಿ, ಲಕ್ಷ್ಮಿ, ಚಂದ್ರಕಲಾ, ತಾಲೂಕು ಕಾರ್ಯದರ್ಶಿ ಸುಧಾಕರ್, ಯುವ ಘಟಕದ ಅಧ್ಯಕ್ಷ ತರುಣ್ ಸರ್ಜಾ, ಕಸಬಾ ಅಧ್ಯಕ್ಷ ಗಿರೀಶ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ್, ಚಂದನ್, ರಮೇಶ್, ಜಗದೀಶ್, ಕಾರ್ಮಿಕ ಘಟಕದ ದಿಲ್ ರಾಜ್, ಆಟೋ ಘಟಕದ ರಾಘವ, ವಿದ್ಯಾರ್ಥಿ ಘಟಕದ ಚಂದನ್, ಮುಖಂಡರಾದ ರಾಕಿ, ಕೃಷ್ಣಪ್ಪ ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಜರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…