ಕನ್ನಡ ಜಾಗೃತಿ ವೇದಿಕೆಯ 30ನೇ ವರ್ಷದ ವಾರ್ಷಿಕೋತ್ಸವ: ಫೆ. 4ರಂದು ಕನ್ನಡಿಗರ ಬೃಹತ್ ಸಮಾವೇಶ

ಕನ್ನಡ ಜಾಗೃತಿ ವೇದಿಕೆಯ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ‌.4 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು. ಎಂ ಹೇಳಿದರು.

ನಗರದ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಮಂಜುನಾಥ ದೇವ ಅವರ ನೇತೃತ್ವದಲ್ಲಿ‌ ಸಮಾವೇಶ ನಡೆಯಲಿದೆ. ಕನ್ನಡಪರ ಸಂಘನೆಗಳ ಮುಖಂಡರು, ಕನ್ನಡದ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷ, ಕರ್ನಾಟಕ ಏಕೀಕರಣವಾಗಿ 68 ವರ್ಷ ಹಾಗೂ ಕನ್ನಡ ಜಾಗೃತಿ ವೇದಿಗೆ ಸ್ಥಾಪನೆಯಾಗಿ 30 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಜನಪದ ಕಲಾತಂಡಗಳು ಮತ್ತು ಸ್ತಬ್ಧ ಚಿತ್ರಗಳ ಭವ್ಯ ಮೆರವಣಿಗೆ ಇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶದ ಉದ್ಘಾಟನೆ ನೆರವೇರಿಸಲಿದ್ದಾರೆ. ಕನ್ನಡಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕೋರಿದರು.

ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಮಾತನಾಡಿ, ಕನ್ನಡ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಸ್ವಾಭಿಮಾನಿ ಕನ್ನಡಿಗರ ಸಮಾವೇಶದಲ್ಲಿ ತಾಲೂಕಿನ ಕನ್ನಡಾಭಿಮಾನಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು. ನಾವೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು ಎಂ. ಹಾಗೂ ಪದಾಧಿಕಾರಿಗಳು ಕನ್ನಡಪರ‌ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಉಪಾಧ್ಯಕ್ಷ ರವಿ, ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ, ಮಹಿಳಾ ಮುಖಂಡರಾದ ಅಂಬಿಕಾ ಟಿ, ವಿಶಾಲಾಕ್ಷಿ, ಪಾರ್ವತಿ, ಲಕ್ಷ್ಮಿ, ಚಂದ್ರಕಲಾ, ತಾಲೂಕು ಕಾರ್ಯದರ್ಶಿ ಸುಧಾಕರ್, ಯುವ ಘಟಕದ ಅಧ್ಯಕ್ಷ ತರುಣ್ ಸರ್ಜಾ, ಕಸಬಾ ಅಧ್ಯಕ್ಷ ಗಿರೀಶ್, ಸಂಘಟನಾ ಕಾರ್ಯದರ್ಶಿ  ವಿಶ್ವನಾಥ್, ಚಂದನ್, ರಮೇಶ್, ಜಗದೀಶ್, ಕಾರ್ಮಿಕ ಘಟಕದ  ದಿಲ್ ರಾಜ್, ಆಟೋ ಘಟಕದ ರಾಘವ, ವಿದ್ಯಾರ್ಥಿ ಘಟಕದ ಚಂದನ್, ಮುಖಂಡರಾದ ರಾಕಿ, ಕೃಷ್ಣಪ್ಪ ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಜರಿದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

20 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago