ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡ ನಾಡಿನ ಪರಂಪರೆಯ ಅನನ್ಯತೆಯನ್ನು ಉಳಿಸಿ ಬೆಳಸುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ ಆಗಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೆಯಕ್ಷಣಾಧಿಕಾರಿ ಕೆ.ಎ.ಶಾಲಿನಿ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಆಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮ ಕ್ಷೇತ್ರದಲ್ಲೂ ಕನ್ನಡ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯು ವೈವಿಧ್ಯಮಯಲ್ಲೂ ಏಕತೆಗೆ ಹೆಸರಾಗಿದೆ. ಕರ್ನಾಟಕದ ಕಲೆ, ಸಾಹಿತ್ಯ, ಸಂಗೀತ, ಶಿಲ್ಪ, ನೃತ್ಯ ಮುಂತಾದ ಸಾಂಸ್ಕೃತಿಕ ಕಲಾ ಪ್ರಕಾರಗಳು ಕನ್ನಡಿಗರ ಗೌರವವನ್ನು ಎಲ್ಲೆಡೆ ಹರಡಿವೆ. ಕನ್ನಡ ನಾಡು ಸಮನ್ವಯ ಮತ್ತು ಸಾಮರಸ್ಯದ ನಾಡು ಎಂದು ಕರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಜವಾಹರ ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ ಮಾತನಾಡಿ, ಕನ್ನಡ ಕವಿಗಳು ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ್ದಾರೆ. ಜನಪದರು, ವಚನಕಾರರು, ಹರಿದಾಸರು, ಅನುಭಾವಿ ಸಂತರು ಉದಾತ್ತ ವಿಚಾರಗಳನ್ನು ಜನರಿಗೆ ಸರಳ ಭಾಷೆಯಲ್ಲಿ ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಮತ್ತು ಉದಾತ್ತ ಚಿಂತನೆಗಳನ್ನು ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ ಸಮಾಜ ನಿರ್ಮಿಸಬೇಕಾಗಿದೆ. ವಿಶ್ವ ಮಾನವ ಪ್ರಜ್ಞೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಕನ್ನಡ ಸಪ್ತಾಹದಲ್ಲಿ ಕನ್ನಡ ನಾಡು ಮತ್ತು ನುಡಿಯ ಮಹತ್ವವನ್ನು ಕುರಿತು ವಿದ್ಯಾರ್ಥಿ ಅಭಿರಾಮ ಮಾತನಾಡಿದರು. ಕಾರ್ಯಕ್ರಮದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್, ಕನ್ನಡ ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಈರಣ್ಣಸಬರದ ಮತ್ತು ವಿದ್ಯಾಲಯದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಕನ್ನಡ ಸಮೂಹಗೀತೆ, ಜಾನಪದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…