ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡ ನಾಡಿನ ಪರಂಪರೆಯ ಅನನ್ಯತೆಯನ್ನು ಉಳಿಸಿ ಬೆಳಸುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ ಆಗಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೆಯಕ್ಷಣಾಧಿಕಾರಿ ಕೆ.ಎ.ಶಾಲಿನಿ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಆಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮ ಕ್ಷೇತ್ರದಲ್ಲೂ ಕನ್ನಡ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯು ವೈವಿಧ್ಯಮಯಲ್ಲೂ ಏಕತೆಗೆ ಹೆಸರಾಗಿದೆ. ಕರ್ನಾಟಕದ ಕಲೆ, ಸಾಹಿತ್ಯ, ಸಂಗೀತ, ಶಿಲ್ಪ, ನೃತ್ಯ ಮುಂತಾದ ಸಾಂಸ್ಕೃತಿಕ ಕಲಾ ಪ್ರಕಾರಗಳು ಕನ್ನಡಿಗರ ಗೌರವವನ್ನು ಎಲ್ಲೆಡೆ ಹರಡಿವೆ. ಕನ್ನಡ ನಾಡು ಸಮನ್ವಯ ಮತ್ತು ಸಾಮರಸ್ಯದ ನಾಡು ಎಂದು ಕರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಜವಾಹರ ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ ಮಾತನಾಡಿ, ಕನ್ನಡ ಕವಿಗಳು ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ್ದಾರೆ. ಜನಪದರು, ವಚನಕಾರರು, ಹರಿದಾಸರು, ಅನುಭಾವಿ ಸಂತರು ಉದಾತ್ತ ವಿಚಾರಗಳನ್ನು ಜನರಿಗೆ ಸರಳ ಭಾಷೆಯಲ್ಲಿ ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಮತ್ತು ಉದಾತ್ತ ಚಿಂತನೆಗಳನ್ನು ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ ಸಮಾಜ ನಿರ್ಮಿಸಬೇಕಾಗಿದೆ. ವಿಶ್ವ ಮಾನವ ಪ್ರಜ್ಞೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಕನ್ನಡ ಸಪ್ತಾಹದಲ್ಲಿ ಕನ್ನಡ ನಾಡು ಮತ್ತು ನುಡಿಯ ಮಹತ್ವವನ್ನು ಕುರಿತು ವಿದ್ಯಾರ್ಥಿ ಅಭಿರಾಮ ಮಾತನಾಡಿದರು. ಕಾರ್ಯಕ್ರಮದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್, ಕನ್ನಡ ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಈರಣ್ಣಸಬರದ ಮತ್ತು ವಿದ್ಯಾಲಯದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಕನ್ನಡ ಸಮೂಹಗೀತೆ, ಜಾನಪದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…