ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ-ಸರ್ವೆಯಕ್ಷಣಾಧಿಕಾರಿ ಕೆ.ಎ‌.ಶಾಲಿನಿ

ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡ ನಾಡಿನ ಪರಂಪರೆಯ ಅನನ್ಯತೆಯನ್ನು ಉಳಿಸಿ ಬೆಳಸುವ ಜವಾಬ್ದಾರಿ ನಮ್ಮೆಲ್ಲರ  ಕರ್ತವ್ಯ ಆಗಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೆಯಕ್ಷಣಾಧಿಕಾರಿ ಕೆ.ಎ‌.ಶಾಲಿನಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ,  ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಆಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮ ಕ್ಷೇತ್ರದಲ್ಲೂ ಕನ್ನಡ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯು ವೈವಿಧ್ಯಮಯಲ್ಲೂ ಏಕತೆಗೆ ಹೆಸರಾಗಿದೆ. ಕರ್ನಾಟಕದ ಕಲೆ, ಸಾಹಿತ್ಯ, ಸಂಗೀತ, ಶಿಲ್ಪ, ನೃತ್ಯ ಮುಂತಾದ ಸಾಂಸ್ಕೃತಿಕ ಕಲಾ ಪ್ರಕಾರಗಳು ಕನ್ನಡಿಗರ ಗೌರವವನ್ನು ಎಲ್ಲೆಡೆ ಹರಡಿವೆ. ಕನ್ನಡ ನಾಡು ಸಮನ್ವಯ ಮತ್ತು ಸಾಮರಸ್ಯದ ನಾಡು ಎಂದು ಕರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಜವಾಹರ ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ ಮಾತನಾಡಿ, ಕನ್ನಡ ಕವಿಗಳು ಮಾನವೀಯ ಮೌಲ್ಯಗಳ ಮಹತ್ವವನ್ನು  ಸಾರಿದ್ದಾರೆ. ಜನಪದರು, ವಚನಕಾರರು, ಹರಿದಾಸರು, ಅನುಭಾವಿ ಸಂತರು ಉದಾತ್ತ ವಿಚಾರಗಳನ್ನು ಜನರಿಗೆ ಸರಳ ಭಾಷೆಯಲ್ಲಿ ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಮತ್ತು ಉದಾತ್ತ ಚಿಂತನೆಗಳನ್ನು ಜನರು   ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ ಸಮಾಜ ನಿರ್ಮಿಸಬೇಕಾಗಿದೆ. ವಿಶ್ವ ಮಾನವ ಪ್ರಜ್ಞೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.

ಕನ್ನಡ ಸಪ್ತಾಹದಲ್ಲಿ ಕನ್ನಡ ನಾಡು ಮತ್ತು ನುಡಿಯ ಮಹತ್ವವನ್ನು ಕುರಿತು ವಿದ್ಯಾರ್ಥಿ ಅಭಿರಾಮ  ಮಾತನಾಡಿದರು. ಕಾರ್ಯಕ್ರಮದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ  ಜಯಕೃಷ್ಣನ್, ಕನ್ನಡ ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಈರಣ್ಣಸಬರದ ಮತ್ತು ವಿದ್ಯಾಲಯದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಕನ್ನಡ ಸಮೂಹಗೀತೆ,  ಜಾನಪದ ನೃತ್ಯ  ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

2 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

4 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

8 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

11 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago