ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡ ನಾಡಿನ ಪರಂಪರೆಯ ಅನನ್ಯತೆಯನ್ನು ಉಳಿಸಿ ಬೆಳಸುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ ಆಗಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೆಯಕ್ಷಣಾಧಿಕಾರಿ ಕೆ.ಎ.ಶಾಲಿನಿ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಆಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮ ಕ್ಷೇತ್ರದಲ್ಲೂ ಕನ್ನಡ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯು ವೈವಿಧ್ಯಮಯಲ್ಲೂ ಏಕತೆಗೆ ಹೆಸರಾಗಿದೆ. ಕರ್ನಾಟಕದ ಕಲೆ, ಸಾಹಿತ್ಯ, ಸಂಗೀತ, ಶಿಲ್ಪ, ನೃತ್ಯ ಮುಂತಾದ ಸಾಂಸ್ಕೃತಿಕ ಕಲಾ ಪ್ರಕಾರಗಳು ಕನ್ನಡಿಗರ ಗೌರವವನ್ನು ಎಲ್ಲೆಡೆ ಹರಡಿವೆ. ಕನ್ನಡ ನಾಡು ಸಮನ್ವಯ ಮತ್ತು ಸಾಮರಸ್ಯದ ನಾಡು ಎಂದು ಕರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಜವಾಹರ ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ ಮಾತನಾಡಿ, ಕನ್ನಡ ಕವಿಗಳು ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ್ದಾರೆ. ಜನಪದರು, ವಚನಕಾರರು, ಹರಿದಾಸರು, ಅನುಭಾವಿ ಸಂತರು ಉದಾತ್ತ ವಿಚಾರಗಳನ್ನು ಜನರಿಗೆ ಸರಳ ಭಾಷೆಯಲ್ಲಿ ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಮತ್ತು ಉದಾತ್ತ ಚಿಂತನೆಗಳನ್ನು ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ ಸಮಾಜ ನಿರ್ಮಿಸಬೇಕಾಗಿದೆ. ವಿಶ್ವ ಮಾನವ ಪ್ರಜ್ಞೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಕನ್ನಡ ಸಪ್ತಾಹದಲ್ಲಿ ಕನ್ನಡ ನಾಡು ಮತ್ತು ನುಡಿಯ ಮಹತ್ವವನ್ನು ಕುರಿತು ವಿದ್ಯಾರ್ಥಿ ಅಭಿರಾಮ ಮಾತನಾಡಿದರು. ಕಾರ್ಯಕ್ರಮದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್, ಕನ್ನಡ ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಈರಣ್ಣಸಬರದ ಮತ್ತು ವಿದ್ಯಾಲಯದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಕನ್ನಡ ಸಮೂಹಗೀತೆ, ಜಾನಪದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…