ಕನ್ನಡ ನಾಡಿನ ನೆಲ, ಜಲದ ಋಣವನ್ನ ತೀರಿಸುವುದಕ್ಕೆ‌ ಆಗೋದಿಲ್ಲ- ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗೆ ನಾವು ಗೌರವ ನೀಡಲೇಬೇಕು- ನಟಿ ಪೂಜಾ ಗಾಂಧಿ

ಬೇರೆ ಬೇರೆ ರಾಜ್ಯಗಳಿಂದ,‌ ದೇಶಗಳಿಂದ ಕರ್ನಾಟಕಕ್ಕೆ ಬಂದವರು ಮೊದಲು ಕನ್ನಡವನ್ನ ಕಲಿತು ಮಾತನಾಡಬೇಕು. ಕನ್ನಡ ನಾಡಿನ ನೆಲ, ಜಲದ ಋಣವನ್ನ ತೀರಿಸುವುದಕ್ಕೆ‌ ಆಗೋದಿಲ್ಲ. ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗೆ ನಾವು ಗೌರವ ನೀಡಲೇಬೇಕು. ನಾನು ಬೇರೆ ರಾಜ್ಯದವರಾಗಿರಬಹುದು ಆದರೆ ನನ್ನ ಕರ್ಮ ಭೂಮಿ ಕರ್ನಾಟಕ. ನಾನು ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಬಯಸುತ್ತೇನೆ ಎಂದು ನಟಿ ಪೂಜಾಗಾಂಧಿ ಹೇಳಿದರು.

ನಗರದ ನಿವೇದಿತಾ ಶಾಲೆಯ 43ನೇ ವರ್ಷದ ವಾಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಮಕ್ಕಳಂತೆ ಬೆರತ ಅವರು ಪುಟಾಣಿ ಮಕ್ಕಳ ಜೊತೆ ಕನ್ನಡ ಹಾಡುಗಳನ್ನ ಹಾಡಿದ ನಂತರ ಅವರು ಮಾತನಾಡಿದರು. ಈ ನೆಲಕ್ಕೆ ಯಾರೇ ಬಂದರೂ ಕನ್ನಡ ಕಲಿಯಲೇ ಬೇಕು ಪೂರ್ತಿಯಾಗಿ ಕನ್ನಡ ಕಲಿಯದೆ ಇದ್ದರು ಸ್ವಲ್ಪ ಆದರೂ ಕನ್ನಡ ಕಲಿಯಬೇಕೆಂದು ಹೊರ ರಾಜ್ಯದ ಇಲ್ಲಿನ ನಿವಾಸಿಗಳಿಗೆ ಹೇಳಿದರು.

ಕನ್ನಡ ನಾಮಫಲಕ ಹೋರಾಟದಲ್ಲಿ ಸಿನಿಮಾ ನಟ ನಟಿಯರು ಭಾಗವಹಿಸಿಲ್ಲ ಎಂಬ ಪ್ರಶ್ನೆಗೆ ಮಾತನಾಡಿದ ಅವರು, ಕನ್ನಡ ನಾಮಫಲಕ ಹೋರಾಟಕ್ಕೆ  ನಾನು ಈಗಾಗಲೇ ಬೆಂಬಲ ಕೊಟ್ಟಿದ್ದೇನೆ, ಹಿಂಸಾತ್ಮಕವಾಗಿ ಏನು ಮಾಡಬಾರದು, ಕಾನಾನಿನ ಅಡಿಯಲ್ಲೇ ಹೋರಾಟ ಮಾಡಬೇಕು, ಕಾನೂನಿನಲ್ಲೇ 60 ರಷ್ಟು ಕನ್ನಡ ಭಾಷೆ ನಾಮಫಲಕದಲ್ಲಿ ಇರಬೇಕೆಂದ್ದು ಹೇಳಲಾಗಿದೆ ಅದನ್ನ ಎಲ್ಲರೂ ಪಾಲಿಸಬೇಕು ಎಂದರು.

ನಿವೇದಿತಾ ಶಾಲೆಯ ಕಾರ್ಯದರ್ಶಿ ಪುರುಷೋತ್ತಮ್ ಮಾತನಾಡಿ, 1981ರಲ್ಲಿ ಪ್ರಾರಂಭವಾದ ಶಾಲೆ ಇವತ್ತು 43ನೇ ವರ್ಷದ ವಾಷಿಕೋತ್ಸವವನ್ನ ಸಂಭ್ರಮ-2023 ಹೆಸರಲ್ಲಿ ಆಚರಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ನಮ್ಮ ಶಾಲೆಯೆಂಬ ಹೆಮ್ಮೆ ಇದೆ ಎಂದರು.

ನಂತರ ನಿವೃತ್ತ ಎಸಿಪಿ ಸುಬ್ಬಣ್ಣ ಮಾತನಾಡಿ, ಇದೇ ಮೊದಲ ಸಲ ಪೂಜಾಗಾಂಧಿಯವರು ದೊಡ್ಡಬಳ್ಳಾಪುರಕ್ಕೆ ಬಂದಿದ್ದಾರೆ, ಅವರನ್ನ ನೋಡಿ ಮಕ್ಕಳು ಪೋಷಕರು ಖುಷಿಪಟ್ಟಿದ್ದಾರೆ. ಹೊರ ರಾಜ್ಯದಿಂದ ಬಂದು ಕನ್ನಡ ಕಲಿತು ಮಾತನಾಡುವ ನಟಿ ಇದ್ದರೇ ಅವರು ಪೂಜಾಗಾಂಧಿ ಮಾತ್ರ ಎಂದರು.

ನಿವೇದಿತಾ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣವನ್ನ ನೀಡಲಾಗುತ್ತಿದೆ, ಈ ಶಾಲೆಯಲ್ಲಿ ಕಲಿತಾ ವಿದ್ಯಾರ್ಥಿಗಳು ಈಗ ಉನ್ನತ ಅಧಿಕಾರಿಗಳಾಗಿದ್ದಾರೆ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಮುನಿಕೃಷ್ಣ ಅವರು ಸಹ ಇದೇ ಶಾಲೆಯ ವಿದ್ಯಾರ್ಥಿ ಎಂದರು.

ಈ ವೇಳೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿ, ಪೋಷಕರು‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

13 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

18 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago