ಬೇರೆ ಬೇರೆ ರಾಜ್ಯಗಳಿಂದ, ದೇಶಗಳಿಂದ ಕರ್ನಾಟಕಕ್ಕೆ ಬಂದವರು ಮೊದಲು ಕನ್ನಡವನ್ನ ಕಲಿತು ಮಾತನಾಡಬೇಕು. ಕನ್ನಡ ನಾಡಿನ ನೆಲ, ಜಲದ ಋಣವನ್ನ ತೀರಿಸುವುದಕ್ಕೆ ಆಗೋದಿಲ್ಲ. ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗೆ ನಾವು ಗೌರವ ನೀಡಲೇಬೇಕು. ನಾನು ಬೇರೆ ರಾಜ್ಯದವರಾಗಿರಬಹುದು ಆದರೆ ನನ್ನ ಕರ್ಮ ಭೂಮಿ ಕರ್ನಾಟಕ. ನಾನು ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಬಯಸುತ್ತೇನೆ ಎಂದು ನಟಿ ಪೂಜಾಗಾಂಧಿ ಹೇಳಿದರು.
ನಿವೇದಿತಾ ಶಾಲೆಯ ಕಾರ್ಯದರ್ಶಿ ಪುರುಷೋತ್ತಮ್ ಮಾತನಾಡಿ, 1981ರಲ್ಲಿ ಪ್ರಾರಂಭವಾದ ಶಾಲೆ ಇವತ್ತು 43ನೇ ವರ್ಷದ ವಾಷಿಕೋತ್ಸವವನ್ನ ಸಂಭ್ರಮ-2023 ಹೆಸರಲ್ಲಿ ಆಚರಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ನಮ್ಮ ಶಾಲೆಯೆಂಬ ಹೆಮ್ಮೆ ಇದೆ ಎಂದರು.
ನಂತರ ನಿವೃತ್ತ ಎಸಿಪಿ ಸುಬ್ಬಣ್ಣ ಮಾತನಾಡಿ, ಇದೇ ಮೊದಲ ಸಲ ಪೂಜಾಗಾಂಧಿಯವರು ದೊಡ್ಡಬಳ್ಳಾಪುರಕ್ಕೆ ಬಂದಿದ್ದಾರೆ, ಅವರನ್ನ ನೋಡಿ ಮಕ್ಕಳು ಪೋಷಕರು ಖುಷಿಪಟ್ಟಿದ್ದಾರೆ. ಹೊರ ರಾಜ್ಯದಿಂದ ಬಂದು ಕನ್ನಡ ಕಲಿತು ಮಾತನಾಡುವ ನಟಿ ಇದ್ದರೇ ಅವರು ಪೂಜಾಗಾಂಧಿ ಮಾತ್ರ ಎಂದರು.
ಈ ವೇಳೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿ, ಪೋಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…