ಬೇರೆ ಬೇರೆ ರಾಜ್ಯಗಳಿಂದ, ದೇಶಗಳಿಂದ ಕರ್ನಾಟಕಕ್ಕೆ ಬಂದವರು ಮೊದಲು ಕನ್ನಡವನ್ನ ಕಲಿತು ಮಾತನಾಡಬೇಕು. ಕನ್ನಡ ನಾಡಿನ ನೆಲ, ಜಲದ ಋಣವನ್ನ ತೀರಿಸುವುದಕ್ಕೆ ಆಗೋದಿಲ್ಲ. ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗೆ ನಾವು ಗೌರವ ನೀಡಲೇಬೇಕು. ನಾನು ಬೇರೆ ರಾಜ್ಯದವರಾಗಿರಬಹುದು ಆದರೆ ನನ್ನ ಕರ್ಮ ಭೂಮಿ ಕರ್ನಾಟಕ. ನಾನು ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಬಯಸುತ್ತೇನೆ ಎಂದು ನಟಿ ಪೂಜಾಗಾಂಧಿ ಹೇಳಿದರು.
ನಿವೇದಿತಾ ಶಾಲೆಯ ಕಾರ್ಯದರ್ಶಿ ಪುರುಷೋತ್ತಮ್ ಮಾತನಾಡಿ, 1981ರಲ್ಲಿ ಪ್ರಾರಂಭವಾದ ಶಾಲೆ ಇವತ್ತು 43ನೇ ವರ್ಷದ ವಾಷಿಕೋತ್ಸವವನ್ನ ಸಂಭ್ರಮ-2023 ಹೆಸರಲ್ಲಿ ಆಚರಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ನಮ್ಮ ಶಾಲೆಯೆಂಬ ಹೆಮ್ಮೆ ಇದೆ ಎಂದರು.
ನಂತರ ನಿವೃತ್ತ ಎಸಿಪಿ ಸುಬ್ಬಣ್ಣ ಮಾತನಾಡಿ, ಇದೇ ಮೊದಲ ಸಲ ಪೂಜಾಗಾಂಧಿಯವರು ದೊಡ್ಡಬಳ್ಳಾಪುರಕ್ಕೆ ಬಂದಿದ್ದಾರೆ, ಅವರನ್ನ ನೋಡಿ ಮಕ್ಕಳು ಪೋಷಕರು ಖುಷಿಪಟ್ಟಿದ್ದಾರೆ. ಹೊರ ರಾಜ್ಯದಿಂದ ಬಂದು ಕನ್ನಡ ಕಲಿತು ಮಾತನಾಡುವ ನಟಿ ಇದ್ದರೇ ಅವರು ಪೂಜಾಗಾಂಧಿ ಮಾತ್ರ ಎಂದರು.
ಈ ವೇಳೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿ, ಪೋಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…