ಬೇರೆ ಬೇರೆ ರಾಜ್ಯಗಳಿಂದ, ದೇಶಗಳಿಂದ ಕರ್ನಾಟಕಕ್ಕೆ ಬಂದವರು ಮೊದಲು ಕನ್ನಡವನ್ನ ಕಲಿತು ಮಾತನಾಡಬೇಕು. ಕನ್ನಡ ನಾಡಿನ ನೆಲ, ಜಲದ ಋಣವನ್ನ ತೀರಿಸುವುದಕ್ಕೆ ಆಗೋದಿಲ್ಲ. ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗೆ ನಾವು ಗೌರವ ನೀಡಲೇಬೇಕು. ನಾನು ಬೇರೆ ರಾಜ್ಯದವರಾಗಿರಬಹುದು ಆದರೆ ನನ್ನ ಕರ್ಮ ಭೂಮಿ ಕರ್ನಾಟಕ. ನಾನು ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಬಯಸುತ್ತೇನೆ ಎಂದು ನಟಿ ಪೂಜಾಗಾಂಧಿ ಹೇಳಿದರು.
ನಿವೇದಿತಾ ಶಾಲೆಯ ಕಾರ್ಯದರ್ಶಿ ಪುರುಷೋತ್ತಮ್ ಮಾತನಾಡಿ, 1981ರಲ್ಲಿ ಪ್ರಾರಂಭವಾದ ಶಾಲೆ ಇವತ್ತು 43ನೇ ವರ್ಷದ ವಾಷಿಕೋತ್ಸವವನ್ನ ಸಂಭ್ರಮ-2023 ಹೆಸರಲ್ಲಿ ಆಚರಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ನಮ್ಮ ಶಾಲೆಯೆಂಬ ಹೆಮ್ಮೆ ಇದೆ ಎಂದರು.
ನಂತರ ನಿವೃತ್ತ ಎಸಿಪಿ ಸುಬ್ಬಣ್ಣ ಮಾತನಾಡಿ, ಇದೇ ಮೊದಲ ಸಲ ಪೂಜಾಗಾಂಧಿಯವರು ದೊಡ್ಡಬಳ್ಳಾಪುರಕ್ಕೆ ಬಂದಿದ್ದಾರೆ, ಅವರನ್ನ ನೋಡಿ ಮಕ್ಕಳು ಪೋಷಕರು ಖುಷಿಪಟ್ಟಿದ್ದಾರೆ. ಹೊರ ರಾಜ್ಯದಿಂದ ಬಂದು ಕನ್ನಡ ಕಲಿತು ಮಾತನಾಡುವ ನಟಿ ಇದ್ದರೇ ಅವರು ಪೂಜಾಗಾಂಧಿ ಮಾತ್ರ ಎಂದರು.
ಈ ವೇಳೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿ, ಪೋಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…