ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು. ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು, ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.
ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ. ಇದು ನಮ್ಮ ಸಂವಿಧಾನದ ಮತ್ತು ನಮ್ಮ ಸರ್ಕಾರದ ಆಶಯ. ಸರ್ವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿಯೇ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು. ನಮ್ಮ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ದೊರರಬೇಕು ಎಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಅವರ ಆಶಯಗಳ ಹಾದಿಯಲ್ಲಿ ನಮ್ಮ ಸರ್ಕಾರ ಸಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ, ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…