Categories: ಮೈಸೂರು

ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸ ಮಾಡುತ್ತೇವೆ- ಸಿಎಂ ಸಿದ್ದರಾಮಯ್ಯ

ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು. ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು, ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ 216 ತಾಲ್ಲೂಕುಗಳಲ್ಲಿ ಮಳೆ ಇಲ್ಲದೆ ತೀವ್ರ ಬರಗಾಲದ ಸ್ಥಿತಿ ಇದೆ. ಮಳೆ ಇಲ್ಲದೆ ನಾಡಿನ ರೈತ ಕುಲ, ನಾಡಿನ ಜನತೆ ಕಷ್ಟದಲ್ಲಿದ್ದಾರೆ. ಆದ್ದರಿಂದ ಅದ್ಧೂರಿಯಲ್ಲದ ವೈಭವಕ್ಕೆ ಕೊರತೆ ಇಲ್ಲದ ಅರ್ಥಪೂರ್ಣ ದಸರಾ ಆಚರಿಸಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.

ಮೈಸೂರು ಅರಸರ ಕಾಲದಿಂದಲೂ ಅತ್ಯಂತ ವೈಭವದಿಂದ ಆಚರಿಸಲ್ಪಡುತ್ತಿರುವ ದಸರಾವನ್ನು ನಾನು ತಂದೆಯ ಹೆಗಲ ಮೇಲೆ ಕುಳಿತು ನೋಡುತ್ತಿದ್ದೆ. ರಾಜರ ಕಾಲ ಮುಗಿದು ಪ್ರಜಾರಾಜ್ಯ ಬಂದ ಬಳಿಕ ರಾಜ್ಯ ಸರ್ಕಾರ ನಾಡಹಬ್ಬವಾಗಿ ದಸರಾವನ್ನು ಆಚರಿಸುತ್ತಿದೆ ಎಂದರು.

ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ. ಇದು ನಮ್ಮ ಸಂವಿಧಾನದ ಮತ್ತು ನಮ್ಮ ಸರ್ಕಾರದ ಆಶಯ. ಸರ್ವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿಯೇ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು. ನಮ್ಮ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ದೊರರಬೇಕು ಎಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಅವರ ಆಶಯಗಳ ಹಾದಿಯಲ್ಲಿ ನಮ್ಮ‌ ಸರ್ಕಾರ ಸಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ, ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

2 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

4 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

11 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

19 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

20 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago