ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು. ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು, ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.
ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ. ಇದು ನಮ್ಮ ಸಂವಿಧಾನದ ಮತ್ತು ನಮ್ಮ ಸರ್ಕಾರದ ಆಶಯ. ಸರ್ವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿಯೇ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು. ನಮ್ಮ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ದೊರರಬೇಕು ಎಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಅವರ ಆಶಯಗಳ ಹಾದಿಯಲ್ಲಿ ನಮ್ಮ ಸರ್ಕಾರ ಸಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ, ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…