ಕನ್ನಡ ನಾಡು ನುಡಿಗೆ ಕನ್ನಡ ರಾಜರುಗಳ ಕೊಡುಗೆ ಅಪಾರ-ಮಣ್ಣೆ ಮೋಹನ್

ಭಾರತೀಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತವು ಧಾರ್ಮಿಕ, ನೈತಿಕ, ಮತ್ತು ಸಾಮಾಜಿಕ ಮೌಲ್ಯಗಳಿಂದ ವಿಶ್ವವಿಖ್ಯಾತವಾಗಿವೆ ಎಂದು ಜ್ಞಾನ ಗಂಗಾ ಸಾಹಿತ್ಯ ರಂಗ ವೇದಿಕೆಯ ಅಧ್ಯಕ್ಷ ಮಣ್ಣೆ ಮೋಹನ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ಕವಯಿತ್ರಿ ಎಂ.ಬಿ.ಯಶೋಧಮ್ಮ ಅವರ ಕವನ ಸಂಕಲನ ಪ್ರಣವ ಭಾನು ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತೀಯ ಭವ್ಯ ಪರಂಪರೆಯ ಕಲೆ, ಸಾಹಿತ್ಯ, ಸಂಗೀತ ಮುಂತಾದ ಸಾಂಸ್ಕೃತಿಕತೆಗಳನ್ನು ಸೃಷ್ಟಿ ಮಾಡಿದವರು ಎಂದಿಗೂ ಪೂಜ್ಯನೀಯರು. ಇಂದಿನ ಮಕ್ಕಳನ್ನು ನಾವು ಭಾರತೀಯ ಸಂಸ್ಕೃತಿಯ ಪ್ರಚಾರಕರಾಗಿ ಮಾಡಬೇಕಾಗಿದೆ ಎಂದರು.

ಕನ್ನಡ ನಾಡಿನ ರಾಜರುಗಳ ಸಾಮ್ರಾಜ್ಯ ವಿಸ್ತರಣೆ ಮತ್ತು ಆಳ್ವಿಕೆ ಕನ್ನಡಿಗರಿಗೆ ಹೆಗ್ಗಳಿಕೆ ವಿಚಾರವಾಗಿದೆ. ಕನ್ನಡ ನಾಡು ನುಡಿಗೆ ಕನ್ನಡ ರಾಜರುಗಳ ಕೊಡುಗೆ ಅಪಾರವಾಗಿದೆ. ಕನ್ನಡ ನಾಡು-ನುಡಿಯ ವೈಭವದ ಬಗ್ಗೆ ಕನ್ನಡಿಗರು ಸದಾ ಹೆಮ್ಮೆ ಪಡುತ್ತಾರೆ. ಕನ್ನಡ ಕವಿಗಳ ಕಾವ್ಯಧಾರೆ ನಿರಂತರವಾಗಿ ಹರಿಯುತ್ತಿದೆ. ಕನ್ನಡ ಕವಿಗಳು ತಮ್ಮ ಸೃಜನಶೀಲತೆಯಿಂದ ಕನ್ನಡ ಕಾವ್ಯ ಲೋಕವನ್ನು ವೈವಿಧ್ಯಗೊಳಿಸಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ಮಾತನಾಡಿ, ಕವಯಿತ್ರಿ ಎಂ.ಬಿ.ಯಶೋಧಮ್ಮ ಅವರ ಪ್ರಣವ ಭಾನು ಕವನ ಸಂಕಲನ ಸಹೃದಯರ  ಮನದಲ್ಲಿ   ಆಲೋಚನೆ ಶಕ್ತಿಯನ್ನು ವೃದ್ಧಿಸುತ್ತದೆ. ಕವಿತೆಗಳಲ್ಲಿ  ಸಮಾಜದ ಸಮಸ್ಯೆಗಳು, ಮಾನವ ಭಾವನೆಗಳು ಮತ್ತು ಜೀವನದ ಅನುಭವಗಳನ್ನು ಒಳಗೊಂಡಿವೆ. ಕವನ ಸಂಕಲನದಲ್ಲಿರುವ ಕವಿತೆಗಳ ಶೈಲಿ, ನಿರೂಪಣೆ    ಉತ್ತಮವಾಗಿದೆ. ಕನ್ನಡ ಸಾಹಿತ್ಯಕ್ಕೆ ಕವಯಿತ್ರಿಯರ ಕೊಡುಗೆ ಅಪಾರವಾಗಿದೆ, ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ವೈವಿಧ್ಯಮಯ. ಸಾಹಿತ್ಯವನ್ನು ರಚನೆ ಮಾಡಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕವಿಗಳು ಮತ್ತು ಬರಹಗಾರರು  ನಿರಂತರವಾಗಿ ಅಧ್ಯಯನಶೀಲರಾಗಿರಬೇಕು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅನನ್ಯತೆ ಅರಿವು,  ಲೋಕಾನುಭವದ ಜೊತೆಗೆ ಮಾನವೀಯತೆ, ಸಾಮಾಜಿಕ ಪ್ರಜ್ಞೆ  ಹೊಂದಿರಬೇಕು. ಕಾವ್ಯವು ಜನರನ್ನು ತಲುಪಿದಾಗ ಮಾತ್ರ ತನ್ನ ಸಾರ್ಥಕತೆಯನ್ನು ಪಡೆಯುತ್ತದೆ. ಬದುಕಿನ ಅನುಭವಗಳನ್ನು, ವೈಯಕ್ತಿಕ ಚಿಂತನೆಗಳನ್ನು, ಮತ್ತು ಸಮಾಜದ ವಾಸ್ತವವನ್ನು ಅಭಿವ್ಯಕ್ತಿಗೊಳಿಸುವ ಕವಿ ಸಮಾಜಮುಖಿ ಜೀವನ ಶೈಲಿ ಹೊಂದಿರಬೇಕು ಎಂದರು.

ಕೃಷಿಕರಾದ ಎಂ.ಪಿ.ಬಸವರಾಜು ಅವರು ಪ್ರಣವ ಭಾನು ಕವನ ಸಂಕಲನ ಬಿಡುಗಡೆ ಮಾಡಿದ ಸಮಾರಂಭದಲ್ಲಿ ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ಕವಯಿತ್ರಿ ಎಂ.ಬಿ.ಯಶೋಧಮ್ಮ, ಶಿಕ್ಷಕ ಅಶೋಕಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್. ಹೆಗಡೆ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

38 minutes ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

59 minutes ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

12 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

13 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago