ಕನ್ನಡ ನಾಡು ನುಡಿಗೆ ಕನ್ನಡ ರಾಜರುಗಳ ಕೊಡುಗೆ ಅಪಾರ-ಮಣ್ಣೆ ಮೋಹನ್

ಭಾರತೀಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತವು ಧಾರ್ಮಿಕ, ನೈತಿಕ, ಮತ್ತು ಸಾಮಾಜಿಕ ಮೌಲ್ಯಗಳಿಂದ ವಿಶ್ವವಿಖ್ಯಾತವಾಗಿವೆ ಎಂದು ಜ್ಞಾನ ಗಂಗಾ ಸಾಹಿತ್ಯ ರಂಗ ವೇದಿಕೆಯ ಅಧ್ಯಕ್ಷ ಮಣ್ಣೆ ಮೋಹನ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ಕವಯಿತ್ರಿ ಎಂ.ಬಿ.ಯಶೋಧಮ್ಮ ಅವರ ಕವನ ಸಂಕಲನ ಪ್ರಣವ ಭಾನು ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತೀಯ ಭವ್ಯ ಪರಂಪರೆಯ ಕಲೆ, ಸಾಹಿತ್ಯ, ಸಂಗೀತ ಮುಂತಾದ ಸಾಂಸ್ಕೃತಿಕತೆಗಳನ್ನು ಸೃಷ್ಟಿ ಮಾಡಿದವರು ಎಂದಿಗೂ ಪೂಜ್ಯನೀಯರು. ಇಂದಿನ ಮಕ್ಕಳನ್ನು ನಾವು ಭಾರತೀಯ ಸಂಸ್ಕೃತಿಯ ಪ್ರಚಾರಕರಾಗಿ ಮಾಡಬೇಕಾಗಿದೆ ಎಂದರು.

ಕನ್ನಡ ನಾಡಿನ ರಾಜರುಗಳ ಸಾಮ್ರಾಜ್ಯ ವಿಸ್ತರಣೆ ಮತ್ತು ಆಳ್ವಿಕೆ ಕನ್ನಡಿಗರಿಗೆ ಹೆಗ್ಗಳಿಕೆ ವಿಚಾರವಾಗಿದೆ. ಕನ್ನಡ ನಾಡು ನುಡಿಗೆ ಕನ್ನಡ ರಾಜರುಗಳ ಕೊಡುಗೆ ಅಪಾರವಾಗಿದೆ. ಕನ್ನಡ ನಾಡು-ನುಡಿಯ ವೈಭವದ ಬಗ್ಗೆ ಕನ್ನಡಿಗರು ಸದಾ ಹೆಮ್ಮೆ ಪಡುತ್ತಾರೆ. ಕನ್ನಡ ಕವಿಗಳ ಕಾವ್ಯಧಾರೆ ನಿರಂತರವಾಗಿ ಹರಿಯುತ್ತಿದೆ. ಕನ್ನಡ ಕವಿಗಳು ತಮ್ಮ ಸೃಜನಶೀಲತೆಯಿಂದ ಕನ್ನಡ ಕಾವ್ಯ ಲೋಕವನ್ನು ವೈವಿಧ್ಯಗೊಳಿಸಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ಮಾತನಾಡಿ, ಕವಯಿತ್ರಿ ಎಂ.ಬಿ.ಯಶೋಧಮ್ಮ ಅವರ ಪ್ರಣವ ಭಾನು ಕವನ ಸಂಕಲನ ಸಹೃದಯರ  ಮನದಲ್ಲಿ   ಆಲೋಚನೆ ಶಕ್ತಿಯನ್ನು ವೃದ್ಧಿಸುತ್ತದೆ. ಕವಿತೆಗಳಲ್ಲಿ  ಸಮಾಜದ ಸಮಸ್ಯೆಗಳು, ಮಾನವ ಭಾವನೆಗಳು ಮತ್ತು ಜೀವನದ ಅನುಭವಗಳನ್ನು ಒಳಗೊಂಡಿವೆ. ಕವನ ಸಂಕಲನದಲ್ಲಿರುವ ಕವಿತೆಗಳ ಶೈಲಿ, ನಿರೂಪಣೆ    ಉತ್ತಮವಾಗಿದೆ. ಕನ್ನಡ ಸಾಹಿತ್ಯಕ್ಕೆ ಕವಯಿತ್ರಿಯರ ಕೊಡುಗೆ ಅಪಾರವಾಗಿದೆ, ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ವೈವಿಧ್ಯಮಯ. ಸಾಹಿತ್ಯವನ್ನು ರಚನೆ ಮಾಡಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕವಿಗಳು ಮತ್ತು ಬರಹಗಾರರು  ನಿರಂತರವಾಗಿ ಅಧ್ಯಯನಶೀಲರಾಗಿರಬೇಕು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅನನ್ಯತೆ ಅರಿವು,  ಲೋಕಾನುಭವದ ಜೊತೆಗೆ ಮಾನವೀಯತೆ, ಸಾಮಾಜಿಕ ಪ್ರಜ್ಞೆ  ಹೊಂದಿರಬೇಕು. ಕಾವ್ಯವು ಜನರನ್ನು ತಲುಪಿದಾಗ ಮಾತ್ರ ತನ್ನ ಸಾರ್ಥಕತೆಯನ್ನು ಪಡೆಯುತ್ತದೆ. ಬದುಕಿನ ಅನುಭವಗಳನ್ನು, ವೈಯಕ್ತಿಕ ಚಿಂತನೆಗಳನ್ನು, ಮತ್ತು ಸಮಾಜದ ವಾಸ್ತವವನ್ನು ಅಭಿವ್ಯಕ್ತಿಗೊಳಿಸುವ ಕವಿ ಸಮಾಜಮುಖಿ ಜೀವನ ಶೈಲಿ ಹೊಂದಿರಬೇಕು ಎಂದರು.

ಕೃಷಿಕರಾದ ಎಂ.ಪಿ.ಬಸವರಾಜು ಅವರು ಪ್ರಣವ ಭಾನು ಕವನ ಸಂಕಲನ ಬಿಡುಗಡೆ ಮಾಡಿದ ಸಮಾರಂಭದಲ್ಲಿ ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ಕವಯಿತ್ರಿ ಎಂ.ಬಿ.ಯಶೋಧಮ್ಮ, ಶಿಕ್ಷಕ ಅಶೋಕಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್. ಹೆಗಡೆ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

3 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago