ಕನ್ನಡ ನಾಡು ನುಡಿಗೆ ಕನ್ನಡ ರಾಜರುಗಳ ಕೊಡುಗೆ ಅಪಾರ-ಮಣ್ಣೆ ಮೋಹನ್

ಭಾರತೀಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತವು ಧಾರ್ಮಿಕ, ನೈತಿಕ, ಮತ್ತು ಸಾಮಾಜಿಕ ಮೌಲ್ಯಗಳಿಂದ ವಿಶ್ವವಿಖ್ಯಾತವಾಗಿವೆ ಎಂದು ಜ್ಞಾನ ಗಂಗಾ ಸಾಹಿತ್ಯ ರಂಗ ವೇದಿಕೆಯ ಅಧ್ಯಕ್ಷ ಮಣ್ಣೆ ಮೋಹನ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ಕವಯಿತ್ರಿ ಎಂ.ಬಿ.ಯಶೋಧಮ್ಮ ಅವರ ಕವನ ಸಂಕಲನ ಪ್ರಣವ ಭಾನು ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತೀಯ ಭವ್ಯ ಪರಂಪರೆಯ ಕಲೆ, ಸಾಹಿತ್ಯ, ಸಂಗೀತ ಮುಂತಾದ ಸಾಂಸ್ಕೃತಿಕತೆಗಳನ್ನು ಸೃಷ್ಟಿ ಮಾಡಿದವರು ಎಂದಿಗೂ ಪೂಜ್ಯನೀಯರು. ಇಂದಿನ ಮಕ್ಕಳನ್ನು ನಾವು ಭಾರತೀಯ ಸಂಸ್ಕೃತಿಯ ಪ್ರಚಾರಕರಾಗಿ ಮಾಡಬೇಕಾಗಿದೆ ಎಂದರು.

ಕನ್ನಡ ನಾಡಿನ ರಾಜರುಗಳ ಸಾಮ್ರಾಜ್ಯ ವಿಸ್ತರಣೆ ಮತ್ತು ಆಳ್ವಿಕೆ ಕನ್ನಡಿಗರಿಗೆ ಹೆಗ್ಗಳಿಕೆ ವಿಚಾರವಾಗಿದೆ. ಕನ್ನಡ ನಾಡು ನುಡಿಗೆ ಕನ್ನಡ ರಾಜರುಗಳ ಕೊಡುಗೆ ಅಪಾರವಾಗಿದೆ. ಕನ್ನಡ ನಾಡು-ನುಡಿಯ ವೈಭವದ ಬಗ್ಗೆ ಕನ್ನಡಿಗರು ಸದಾ ಹೆಮ್ಮೆ ಪಡುತ್ತಾರೆ. ಕನ್ನಡ ಕವಿಗಳ ಕಾವ್ಯಧಾರೆ ನಿರಂತರವಾಗಿ ಹರಿಯುತ್ತಿದೆ. ಕನ್ನಡ ಕವಿಗಳು ತಮ್ಮ ಸೃಜನಶೀಲತೆಯಿಂದ ಕನ್ನಡ ಕಾವ್ಯ ಲೋಕವನ್ನು ವೈವಿಧ್ಯಗೊಳಿಸಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ಮಾತನಾಡಿ, ಕವಯಿತ್ರಿ ಎಂ.ಬಿ.ಯಶೋಧಮ್ಮ ಅವರ ಪ್ರಣವ ಭಾನು ಕವನ ಸಂಕಲನ ಸಹೃದಯರ  ಮನದಲ್ಲಿ   ಆಲೋಚನೆ ಶಕ್ತಿಯನ್ನು ವೃದ್ಧಿಸುತ್ತದೆ. ಕವಿತೆಗಳಲ್ಲಿ  ಸಮಾಜದ ಸಮಸ್ಯೆಗಳು, ಮಾನವ ಭಾವನೆಗಳು ಮತ್ತು ಜೀವನದ ಅನುಭವಗಳನ್ನು ಒಳಗೊಂಡಿವೆ. ಕವನ ಸಂಕಲನದಲ್ಲಿರುವ ಕವಿತೆಗಳ ಶೈಲಿ, ನಿರೂಪಣೆ    ಉತ್ತಮವಾಗಿದೆ. ಕನ್ನಡ ಸಾಹಿತ್ಯಕ್ಕೆ ಕವಯಿತ್ರಿಯರ ಕೊಡುಗೆ ಅಪಾರವಾಗಿದೆ, ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ವೈವಿಧ್ಯಮಯ. ಸಾಹಿತ್ಯವನ್ನು ರಚನೆ ಮಾಡಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕವಿಗಳು ಮತ್ತು ಬರಹಗಾರರು  ನಿರಂತರವಾಗಿ ಅಧ್ಯಯನಶೀಲರಾಗಿರಬೇಕು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅನನ್ಯತೆ ಅರಿವು,  ಲೋಕಾನುಭವದ ಜೊತೆಗೆ ಮಾನವೀಯತೆ, ಸಾಮಾಜಿಕ ಪ್ರಜ್ಞೆ  ಹೊಂದಿರಬೇಕು. ಕಾವ್ಯವು ಜನರನ್ನು ತಲುಪಿದಾಗ ಮಾತ್ರ ತನ್ನ ಸಾರ್ಥಕತೆಯನ್ನು ಪಡೆಯುತ್ತದೆ. ಬದುಕಿನ ಅನುಭವಗಳನ್ನು, ವೈಯಕ್ತಿಕ ಚಿಂತನೆಗಳನ್ನು, ಮತ್ತು ಸಮಾಜದ ವಾಸ್ತವವನ್ನು ಅಭಿವ್ಯಕ್ತಿಗೊಳಿಸುವ ಕವಿ ಸಮಾಜಮುಖಿ ಜೀವನ ಶೈಲಿ ಹೊಂದಿರಬೇಕು ಎಂದರು.

ಕೃಷಿಕರಾದ ಎಂ.ಪಿ.ಬಸವರಾಜು ಅವರು ಪ್ರಣವ ಭಾನು ಕವನ ಸಂಕಲನ ಬಿಡುಗಡೆ ಮಾಡಿದ ಸಮಾರಂಭದಲ್ಲಿ ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ಕವಯಿತ್ರಿ ಎಂ.ಬಿ.ಯಶೋಧಮ್ಮ, ಶಿಕ್ಷಕ ಅಶೋಕಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್. ಹೆಗಡೆ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

8 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

11 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

1 day ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

1 day ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

1 day ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

2 days ago