ಕನ್ನಡ ನಾಡು ನುಡಿಗೆ ಕನ್ನಡ ರಾಜರುಗಳ ಕೊಡುಗೆ ಅಪಾರ-ಮಣ್ಣೆ ಮೋಹನ್

ಭಾರತೀಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತವು ಧಾರ್ಮಿಕ, ನೈತಿಕ, ಮತ್ತು ಸಾಮಾಜಿಕ ಮೌಲ್ಯಗಳಿಂದ ವಿಶ್ವವಿಖ್ಯಾತವಾಗಿವೆ ಎಂದು ಜ್ಞಾನ ಗಂಗಾ ಸಾಹಿತ್ಯ ರಂಗ ವೇದಿಕೆಯ ಅಧ್ಯಕ್ಷ ಮಣ್ಣೆ ಮೋಹನ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ಕವಯಿತ್ರಿ ಎಂ.ಬಿ.ಯಶೋಧಮ್ಮ ಅವರ ಕವನ ಸಂಕಲನ ಪ್ರಣವ ಭಾನು ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತೀಯ ಭವ್ಯ ಪರಂಪರೆಯ ಕಲೆ, ಸಾಹಿತ್ಯ, ಸಂಗೀತ ಮುಂತಾದ ಸಾಂಸ್ಕೃತಿಕತೆಗಳನ್ನು ಸೃಷ್ಟಿ ಮಾಡಿದವರು ಎಂದಿಗೂ ಪೂಜ್ಯನೀಯರು. ಇಂದಿನ ಮಕ್ಕಳನ್ನು ನಾವು ಭಾರತೀಯ ಸಂಸ್ಕೃತಿಯ ಪ್ರಚಾರಕರಾಗಿ ಮಾಡಬೇಕಾಗಿದೆ ಎಂದರು.

ಕನ್ನಡ ನಾಡಿನ ರಾಜರುಗಳ ಸಾಮ್ರಾಜ್ಯ ವಿಸ್ತರಣೆ ಮತ್ತು ಆಳ್ವಿಕೆ ಕನ್ನಡಿಗರಿಗೆ ಹೆಗ್ಗಳಿಕೆ ವಿಚಾರವಾಗಿದೆ. ಕನ್ನಡ ನಾಡು ನುಡಿಗೆ ಕನ್ನಡ ರಾಜರುಗಳ ಕೊಡುಗೆ ಅಪಾರವಾಗಿದೆ. ಕನ್ನಡ ನಾಡು-ನುಡಿಯ ವೈಭವದ ಬಗ್ಗೆ ಕನ್ನಡಿಗರು ಸದಾ ಹೆಮ್ಮೆ ಪಡುತ್ತಾರೆ. ಕನ್ನಡ ಕವಿಗಳ ಕಾವ್ಯಧಾರೆ ನಿರಂತರವಾಗಿ ಹರಿಯುತ್ತಿದೆ. ಕನ್ನಡ ಕವಿಗಳು ತಮ್ಮ ಸೃಜನಶೀಲತೆಯಿಂದ ಕನ್ನಡ ಕಾವ್ಯ ಲೋಕವನ್ನು ವೈವಿಧ್ಯಗೊಳಿಸಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ಮಾತನಾಡಿ, ಕವಯಿತ್ರಿ ಎಂ.ಬಿ.ಯಶೋಧಮ್ಮ ಅವರ ಪ್ರಣವ ಭಾನು ಕವನ ಸಂಕಲನ ಸಹೃದಯರ  ಮನದಲ್ಲಿ   ಆಲೋಚನೆ ಶಕ್ತಿಯನ್ನು ವೃದ್ಧಿಸುತ್ತದೆ. ಕವಿತೆಗಳಲ್ಲಿ  ಸಮಾಜದ ಸಮಸ್ಯೆಗಳು, ಮಾನವ ಭಾವನೆಗಳು ಮತ್ತು ಜೀವನದ ಅನುಭವಗಳನ್ನು ಒಳಗೊಂಡಿವೆ. ಕವನ ಸಂಕಲನದಲ್ಲಿರುವ ಕವಿತೆಗಳ ಶೈಲಿ, ನಿರೂಪಣೆ    ಉತ್ತಮವಾಗಿದೆ. ಕನ್ನಡ ಸಾಹಿತ್ಯಕ್ಕೆ ಕವಯಿತ್ರಿಯರ ಕೊಡುಗೆ ಅಪಾರವಾಗಿದೆ, ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ವೈವಿಧ್ಯಮಯ. ಸಾಹಿತ್ಯವನ್ನು ರಚನೆ ಮಾಡಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕವಿಗಳು ಮತ್ತು ಬರಹಗಾರರು  ನಿರಂತರವಾಗಿ ಅಧ್ಯಯನಶೀಲರಾಗಿರಬೇಕು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅನನ್ಯತೆ ಅರಿವು,  ಲೋಕಾನುಭವದ ಜೊತೆಗೆ ಮಾನವೀಯತೆ, ಸಾಮಾಜಿಕ ಪ್ರಜ್ಞೆ  ಹೊಂದಿರಬೇಕು. ಕಾವ್ಯವು ಜನರನ್ನು ತಲುಪಿದಾಗ ಮಾತ್ರ ತನ್ನ ಸಾರ್ಥಕತೆಯನ್ನು ಪಡೆಯುತ್ತದೆ. ಬದುಕಿನ ಅನುಭವಗಳನ್ನು, ವೈಯಕ್ತಿಕ ಚಿಂತನೆಗಳನ್ನು, ಮತ್ತು ಸಮಾಜದ ವಾಸ್ತವವನ್ನು ಅಭಿವ್ಯಕ್ತಿಗೊಳಿಸುವ ಕವಿ ಸಮಾಜಮುಖಿ ಜೀವನ ಶೈಲಿ ಹೊಂದಿರಬೇಕು ಎಂದರು.

ಕೃಷಿಕರಾದ ಎಂ.ಪಿ.ಬಸವರಾಜು ಅವರು ಪ್ರಣವ ಭಾನು ಕವನ ಸಂಕಲನ ಬಿಡುಗಡೆ ಮಾಡಿದ ಸಮಾರಂಭದಲ್ಲಿ ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ಕವಯಿತ್ರಿ ಎಂ.ಬಿ.ಯಶೋಧಮ್ಮ, ಶಿಕ್ಷಕ ಅಶೋಕಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್. ಹೆಗಡೆ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

6 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

7 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

18 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

18 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

18 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago