ಜಗತ್ತಿನ ಬದಲಾವಣೆಯಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಜೀವನದಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ವಿದ್ಯಾನಿಧಿ ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪದವಿ ಪಡೆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ವಿಪುಲವಾದ ಅವಕಾಶಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಪ್ರಾರಂಭವಾಗುತ್ತಿವೆ. ಇವುಗಳ ಸದುಪಯೋಗವನ್ನು ಯುವಕರು ಪಡೆದುಕೊಳ್ಳಬೇಕು. ವೃತ್ತಿ ಜೀವನದಲ್ಲಿ ಸಹ ಉತ್ಸಾಹ ಲವಲವಿಕೆ ಹೊಂದಿರಬೇಕು ಎಂದರು.
ವಿದ್ಯಾರ್ಥಿಗಳು ನಮ್ಮ ನಾಡು ನುಡಿಯ ಹಿರಿಮೆಯನ್ನು ಅರಿಯಬೇಕು. ಕನ್ನಡ ನಾಡು ನುಡಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡ ಪ್ರಜ್ಞೆ ಮತ್ತು ಕರ್ನಾಟಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು. ಕನ್ನಡ ದಿನಪತ್ರಿಕೆಗಳನ್ನು ಮತ್ತು ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ನಿರಂತರವಾಗಿ ಇರಬೇಕು. ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯನ್ನು ನಾವು ಅರಿಯುವುದರೊಂದಿಗೆ ನಮ್ಮ ಜೊತೆಯವರಿಗೂ ಅರಿವು ಮೂಡಿಸಬೇಕು. ಕನ್ನಡಿಗರು ಎಷ್ಟೇ ಭಾಷೆ ಕಲಿತರೂ ಕನ್ನಡ ಭಾಷೆಯನ್ನು ಮರೆಯಬಾರದು ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮಾನವೀಯ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ನಾವು ಕಲಿತ ವಿದ್ಯೆಗೆ ಮತ್ತು ಹುದ್ದೆಗೆ ಗೌರವ ಬರುತ್ತದೆ. ಸ್ಪರ್ಧಾತ್ಮಕ ಕಾಲದಲ್ಲಿ ಪ್ರತಿಭೆಗೆ ಮನ್ನಣೆ ದೊರೆಯುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ವಿದ್ಯೆ ಮತ್ತು ಕೌಶಲ್ಯವನ್ನು ಪಡೆಯಬೇಕು. ಬಸವಣ್ಣ ಮತ್ತು ಶರಣರು ಕಾಯಕ ಪ್ರಜ್ಞೆಯ ಮಹತ್ವವನ್ನು ಸಾರಿದರು. ಬಸವಣ್ಣನವರ ಆರ್ಥಿಕ ಮತ್ತು ಸಾಮಾಜಿಕ ಚಿಂತನೆ ಸಮಾಜ ಬದಲಾವಣೆಗೆ ಸಹಕಾರಿ ಆಯಿತು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ದಿನೇಶ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ರಂಗನಾಥ, ಉಪನ್ಯಾಸಕರುಗಳಾದ ಜಯರಾಮ್, ಚೇತನ್, ತೇಜಸ್ವಿನಿ, ಶಿವಾನಂದ್, ಶ್ರೀಧರ್, ಶಮಬೇಗಂ ಮುಂತಾದವರು ಭಾಗವಹಿಸಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…