ಕನ್ನಡ ನಾಡು ನುಡಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ-ಬೆಂ.ಗ್ರಾ. ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ

ಜಗತ್ತಿನ ಬದಲಾವಣೆಯಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಜೀವನದಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ವಿದ್ಯಾನಿಧಿ ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪದವಿ ಪಡೆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗ ಪಡೆಯಲು‌ ವಿಪುಲವಾದ ಅವಕಾಶಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಪ್ರಾರಂಭವಾಗುತ್ತಿವೆ. ಇವುಗಳ ಸದುಪಯೋಗವನ್ನು ಯುವಕರು ಪಡೆದುಕೊಳ್ಳಬೇಕು. ವೃತ್ತಿ ಜೀವನದಲ್ಲಿ ಸಹ ಉತ್ಸಾಹ ಲವಲವಿಕೆ ಹೊಂದಿರಬೇಕು ಎಂದರು.

ವಿದ್ಯಾರ್ಥಿಗಳು ನಮ್ಮ ನಾಡು ನುಡಿಯ ಹಿರಿಮೆಯನ್ನು ಅರಿಯಬೇಕು. ಕನ್ನಡ ನಾಡು ನುಡಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡ ಪ್ರಜ್ಞೆ ಮತ್ತು ಕರ್ನಾಟಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು. ಕನ್ನಡ ದಿನಪತ್ರಿಕೆಗಳನ್ನು ಮತ್ತು ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ನಿರಂತರವಾಗಿ ಇರಬೇಕು. ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯನ್ನು ನಾವು ಅರಿಯುವುದರೊಂದಿಗೆ ನಮ್ಮ ಜೊತೆಯವರಿಗೂ ಅರಿವು ಮೂಡಿಸಬೇಕು. ಕನ್ನಡಿಗರು ಎಷ್ಟೇ ಭಾಷೆ ಕಲಿತರೂ ಕನ್ನಡ ಭಾಷೆಯನ್ನು ಮರೆಯಬಾರದು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮಾನವೀಯ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ನಾವು ಕಲಿತ ವಿದ್ಯೆಗೆ ಮತ್ತು ಹುದ್ದೆಗೆ ಗೌರವ ಬರುತ್ತದೆ. ಸ್ಪರ್ಧಾತ್ಮಕ ಕಾಲದಲ್ಲಿ ಪ್ರತಿಭೆಗೆ ಮನ್ನಣೆ ದೊರೆಯುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ವಿದ್ಯೆ ಮತ್ತು ಕೌಶಲ್ಯವನ್ನು ಪಡೆಯಬೇಕು. ಬಸವಣ್ಣ ಮತ್ತು ಶರಣರು ಕಾಯಕ ಪ್ರಜ್ಞೆಯ ಮಹತ್ವವನ್ನು ಸಾರಿದರು. ಬಸವಣ್ಣನವರ ಆರ್ಥಿಕ ಮತ್ತು ಸಾಮಾಜಿಕ ಚಿಂತನೆ ಸಮಾಜ ಬದಲಾವಣೆಗೆ ಸಹಕಾರಿ‌ ಆಯಿತು ಎಂದರು.‌

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ದಿನೇಶ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ರಂಗನಾಥ, ಉಪನ್ಯಾಸಕರುಗಳಾದ ಜಯರಾಮ್, ಚೇತನ್, ತೇಜಸ್ವಿನಿ, ಶಿವಾನಂದ್, ಶ್ರೀಧರ್, ಶಮಬೇಗಂ ಮುಂತಾದವರು ಭಾಗವಹಿಸಿದ್ದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

3 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

5 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

13 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

18 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

21 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

22 hours ago