Categories: ರಾಜ್ಯ

ಕನ್ನಡ ನೆಲದ ಪ್ರತಿ ಮಹಿಳೆಯು ಯೋಜನೆಯ ಹಿಂದಿನ ಪ್ರೇರಕ ಶಕ್ತಿ: ನಾಡಿನ ಮಹಿಳೆ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ- ಸಿಎಂ ಸಿದ್ದರಾಮಯ್ಯ

ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತು ಹಗಲಿರುಳು ಶ್ರಮಿಸುತ್ತಿರುವ ನನ್ನ ಸಹೋದರಿಯರಿಗೆ, ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜುಗಳಿಗೆ ಪ್ರಯಾಣ ಬೆಳೆಸುವ ವಿದ್ಯಾರ್ಥಿನಿಯರಿಗೆ, ಅನಾರೋಗ್ಯ, ಅಗತ್ಯ ವಸ್ತುಗಳ ಖರೀದಿ ಇನ್ನಿತರ ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ ಮಾಡುವ ನಾಡಿನ ತಾಯಂದಿರಿಗೆ ನಮ್ಮ ಈ ಶಕ್ತಿ ಯೋಜನೆಯನ್ನು ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ “ಶಕ್ತಿ” ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಆರ್ಥಿಕ ಸಂಕಷ್ಟದ ನಡುವೆಯೂ ಬದುಕಿನ ಉತ್ಸಾಹ ಕಳೆದುಕೊಳ್ಳದೆ, ಸವಾಲುಗಳನ್ನು ಮೆಟ್ಟಿನಿಂತು ಹೋರಾಟದ ಮೂಲಕ ಬದುಕು ಕಟ್ಟಿಕೊಂಡಿರುವ ಕನ್ನಡ ನೆಲದ ಪ್ರತಿ ಮಹಿಳೆಯೂ ನಮ್ಮ ಈ ಯೋಜನೆಯ ಹಿಂದಿನ ಪ್ರೇರಕ ಶಕ್ತಿ ಎಂದರು.

ನಾಡಿನ ಎಲ್ಲ ಮಹಿಳೆಯರು ನಮ್ಮ ಈ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ ಎಂದು ಮನಸ್ಫೂರ್ತಿಯಾಗಿ ಹಾರೈಸುತ್ತೇನೆ ಎಂದು ತಿಳಿಸಿದರು.

ಹೆಣ್ಣುಮಕ್ಕಳು ಇಂದು ಮಧ್ಯಾಹ್ನ 1 ಗಂಟೆಯಿಂದ ಉಚಿತ ಪ್ರಯಾಣದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡ್ ಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ ಅನ್ವಯವಾಗುತ್ತದೆ. ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪಲಿದೆ.

ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣ ಭಾರತಕ್ಕಿಂತ ಸಾಕಷ್ಟು ಹೆಚ್ಚಿದೆ, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೇಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು, ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ.

ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ.

ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಹಲವರು ಟೀಕೆ ಮಾಡಿದರು. ಆದರೆ ನಾವು ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮ ಐದೂ ಗ್ಯಾರೆಂಟಿಗಳ ಜಾರಿಗೆ 59,000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ. ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ.

10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡು ದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10,100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

21 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago