Categories: ರಾಜ್ಯ

ಕನ್ನಡ ನೆಲದ ಪ್ರತಿ ಮಹಿಳೆಯು ಯೋಜನೆಯ ಹಿಂದಿನ ಪ್ರೇರಕ ಶಕ್ತಿ: ನಾಡಿನ ಮಹಿಳೆ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ- ಸಿಎಂ ಸಿದ್ದರಾಮಯ್ಯ

ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತು ಹಗಲಿರುಳು ಶ್ರಮಿಸುತ್ತಿರುವ ನನ್ನ ಸಹೋದರಿಯರಿಗೆ, ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜುಗಳಿಗೆ ಪ್ರಯಾಣ ಬೆಳೆಸುವ ವಿದ್ಯಾರ್ಥಿನಿಯರಿಗೆ, ಅನಾರೋಗ್ಯ, ಅಗತ್ಯ ವಸ್ತುಗಳ ಖರೀದಿ ಇನ್ನಿತರ ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ ಮಾಡುವ ನಾಡಿನ ತಾಯಂದಿರಿಗೆ ನಮ್ಮ ಈ ಶಕ್ತಿ ಯೋಜನೆಯನ್ನು ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ “ಶಕ್ತಿ” ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಆರ್ಥಿಕ ಸಂಕಷ್ಟದ ನಡುವೆಯೂ ಬದುಕಿನ ಉತ್ಸಾಹ ಕಳೆದುಕೊಳ್ಳದೆ, ಸವಾಲುಗಳನ್ನು ಮೆಟ್ಟಿನಿಂತು ಹೋರಾಟದ ಮೂಲಕ ಬದುಕು ಕಟ್ಟಿಕೊಂಡಿರುವ ಕನ್ನಡ ನೆಲದ ಪ್ರತಿ ಮಹಿಳೆಯೂ ನಮ್ಮ ಈ ಯೋಜನೆಯ ಹಿಂದಿನ ಪ್ರೇರಕ ಶಕ್ತಿ ಎಂದರು.

ನಾಡಿನ ಎಲ್ಲ ಮಹಿಳೆಯರು ನಮ್ಮ ಈ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ ಎಂದು ಮನಸ್ಫೂರ್ತಿಯಾಗಿ ಹಾರೈಸುತ್ತೇನೆ ಎಂದು ತಿಳಿಸಿದರು.

ಹೆಣ್ಣುಮಕ್ಕಳು ಇಂದು ಮಧ್ಯಾಹ್ನ 1 ಗಂಟೆಯಿಂದ ಉಚಿತ ಪ್ರಯಾಣದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡ್ ಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ ಅನ್ವಯವಾಗುತ್ತದೆ. ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪಲಿದೆ.

ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣ ಭಾರತಕ್ಕಿಂತ ಸಾಕಷ್ಟು ಹೆಚ್ಚಿದೆ, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೇಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು, ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ.

ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ.

ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಹಲವರು ಟೀಕೆ ಮಾಡಿದರು. ಆದರೆ ನಾವು ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮ ಐದೂ ಗ್ಯಾರೆಂಟಿಗಳ ಜಾರಿಗೆ 59,000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ. ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ.

10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡು ದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10,100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

15 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

19 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago