Categories: ರಾಜ್ಯ

ಕನ್ನಡ ನೆಲದ ಪ್ರತಿ ಮಹಿಳೆಯು ಯೋಜನೆಯ ಹಿಂದಿನ ಪ್ರೇರಕ ಶಕ್ತಿ: ನಾಡಿನ ಮಹಿಳೆ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ- ಸಿಎಂ ಸಿದ್ದರಾಮಯ್ಯ

ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತು ಹಗಲಿರುಳು ಶ್ರಮಿಸುತ್ತಿರುವ ನನ್ನ ಸಹೋದರಿಯರಿಗೆ, ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜುಗಳಿಗೆ ಪ್ರಯಾಣ ಬೆಳೆಸುವ ವಿದ್ಯಾರ್ಥಿನಿಯರಿಗೆ, ಅನಾರೋಗ್ಯ, ಅಗತ್ಯ ವಸ್ತುಗಳ ಖರೀದಿ ಇನ್ನಿತರ ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ ಮಾಡುವ ನಾಡಿನ ತಾಯಂದಿರಿಗೆ ನಮ್ಮ ಈ ಶಕ್ತಿ ಯೋಜನೆಯನ್ನು ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ “ಶಕ್ತಿ” ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಆರ್ಥಿಕ ಸಂಕಷ್ಟದ ನಡುವೆಯೂ ಬದುಕಿನ ಉತ್ಸಾಹ ಕಳೆದುಕೊಳ್ಳದೆ, ಸವಾಲುಗಳನ್ನು ಮೆಟ್ಟಿನಿಂತು ಹೋರಾಟದ ಮೂಲಕ ಬದುಕು ಕಟ್ಟಿಕೊಂಡಿರುವ ಕನ್ನಡ ನೆಲದ ಪ್ರತಿ ಮಹಿಳೆಯೂ ನಮ್ಮ ಈ ಯೋಜನೆಯ ಹಿಂದಿನ ಪ್ರೇರಕ ಶಕ್ತಿ ಎಂದರು.

ನಾಡಿನ ಎಲ್ಲ ಮಹಿಳೆಯರು ನಮ್ಮ ಈ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ ಎಂದು ಮನಸ್ಫೂರ್ತಿಯಾಗಿ ಹಾರೈಸುತ್ತೇನೆ ಎಂದು ತಿಳಿಸಿದರು.

ಹೆಣ್ಣುಮಕ್ಕಳು ಇಂದು ಮಧ್ಯಾಹ್ನ 1 ಗಂಟೆಯಿಂದ ಉಚಿತ ಪ್ರಯಾಣದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡ್ ಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ ಅನ್ವಯವಾಗುತ್ತದೆ. ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪಲಿದೆ.

ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣ ಭಾರತಕ್ಕಿಂತ ಸಾಕಷ್ಟು ಹೆಚ್ಚಿದೆ, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೇಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು, ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ.

ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ.

ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಹಲವರು ಟೀಕೆ ಮಾಡಿದರು. ಆದರೆ ನಾವು ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮ ಐದೂ ಗ್ಯಾರೆಂಟಿಗಳ ಜಾರಿಗೆ 59,000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ. ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ.

10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡು ದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10,100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ.

Ramesh Babu

Journalist

Recent Posts

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

49 minutes ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

4 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

19 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

23 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

24 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago