ಕನ್ನಡ ಪರಂಪರೆ ಉಳಿಸಲು ಸರ್ಕಾರ ಬದ್ದವಾಗಿದೆ- ಸಚಿವ ಕೆ.ಎಚ್.ಮುನಿಯಪ್ಪ

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26 ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ‌ಮುನಿಯಪ್ಪ ಭಾಗವಹಿಸಿದರು.

ನಂತರ ಮಾತನಾಡಿದ ಸಚಿವ, ಕನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ.

ಕನ್ನಡದದ ದಾರ್ಶನಿಕ ಕವಿಗಳಾದ ರನ್ನ , ಪಂಪ, ಕುವೆಂಪು ಹಾಗೂ ಜ್ಞಾನ ಪೀಠ ಪುರಸ್ಕೃತರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ದಾರಾಬೇಂದ್ರೆ,‌ ಚಂದ್ರಶೇಖರ ಕಂಬಾರ, ಕುವೆಂಪು ಮುಂತಾದ ಕವಿಗಳು ಈ ನಾಡಿಗೆ ತನ್ನದೇ ಆದ ಕನ್ನಡ ಸೇವೆ ಮಾಡುವ ಮೂಲಕ ಅವರ ಸಾಹಿತ್ಯ ಹಾಗೂ ಕವನಗಳನ್ನು ಈ ನಾಡಿನ ಜನತೆಗೆ ಹಾಗೂ ಮುಂದಿನ ಪೀಳಿಗೆಗೆ ನೀಡಿದ್ದಾರೆ ಎಂದರು.

ಕನ್ನಡದ ಇತಿಹಾಸ ಈ ರಾಷ್ಟ್ರದ ಭಾಷೆಯಾಗಿದ್ದು, ಕನ್ನಡದ ಶಾಸನಗಳು ಐತಿಹಾಸಿಕವಾಗಿ ಹೆಸರುವಾಸಿಯಾಗಿವೆ.
ಈ ನೆಲ, ಜಲ, ಭಾಷೆ, ನಾಡಿಗಾಗಿ ನಾವು ಸದಾ ಜೊತೆಯಾಗಿ ಕೆಲಸಮಾಡಬೇಕಿದೆ ಎಂದರು.

ಕನ್ನಡದ ಪರಂಪರೆಯನ್ನು ಉಳಿಸಲು ನಮ್ಮ ಸರ್ಕಾರ ಬದ್ದವಾಗಿದ್ದು, ಈ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಲ್ಲಾ ರೀತಿಯ ಸಹಕಾರ ಹಾಗೂ ನೆರವನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ನಾವು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವುದಲ್ಲದೆ ನಮ್ಮ ಮುಂದಿನ ಪೀಳಿಗೆಯ ಜನ ಈ ಭಾಷೆಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಸೂಕ್ತವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಹಿರಿಯ ಸಾಹಿತಿಗಳಾದ ಚನ್ನಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ರಾಜಣ್ಣ, ತಹಶಿಲ್ದಾರ್ ವಿಭಾ ರಾಥೋಡ್, ಡಿವೈಎಸ್ಪಿ ರವಿ, ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಹಾಗೂ ಕನ್ನಡಪರ ಚಿಂತಕರಾದ ಚುಂಚೇಗೌಡ, ರಾಮಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

25 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

12 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago