ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26 ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಭಾಗವಹಿಸಿದರು.
ನಂತರ ಮಾತನಾಡಿದ ಸಚಿವ, ಕನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ.
ಕನ್ನಡದದ ದಾರ್ಶನಿಕ ಕವಿಗಳಾದ ರನ್ನ , ಪಂಪ, ಕುವೆಂಪು ಹಾಗೂ ಜ್ಞಾನ ಪೀಠ ಪುರಸ್ಕೃತರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ದಾರಾಬೇಂದ್ರೆ, ಚಂದ್ರಶೇಖರ ಕಂಬಾರ, ಕುವೆಂಪು ಮುಂತಾದ ಕವಿಗಳು ಈ ನಾಡಿಗೆ ತನ್ನದೇ ಆದ ಕನ್ನಡ ಸೇವೆ ಮಾಡುವ ಮೂಲಕ ಅವರ ಸಾಹಿತ್ಯ ಹಾಗೂ ಕವನಗಳನ್ನು ಈ ನಾಡಿನ ಜನತೆಗೆ ಹಾಗೂ ಮುಂದಿನ ಪೀಳಿಗೆಗೆ ನೀಡಿದ್ದಾರೆ ಎಂದರು.
ಕನ್ನಡದ ಇತಿಹಾಸ ಈ ರಾಷ್ಟ್ರದ ಭಾಷೆಯಾಗಿದ್ದು, ಕನ್ನಡದ ಶಾಸನಗಳು ಐತಿಹಾಸಿಕವಾಗಿ ಹೆಸರುವಾಸಿಯಾಗಿವೆ.
ಈ ನೆಲ, ಜಲ, ಭಾಷೆ, ನಾಡಿಗಾಗಿ ನಾವು ಸದಾ ಜೊತೆಯಾಗಿ ಕೆಲಸಮಾಡಬೇಕಿದೆ ಎಂದರು.
ಕನ್ನಡದ ಪರಂಪರೆಯನ್ನು ಉಳಿಸಲು ನಮ್ಮ ಸರ್ಕಾರ ಬದ್ದವಾಗಿದ್ದು, ಈ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಲ್ಲಾ ರೀತಿಯ ಸಹಕಾರ ಹಾಗೂ ನೆರವನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ನಾವು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವುದಲ್ಲದೆ ನಮ್ಮ ಮುಂದಿನ ಪೀಳಿಗೆಯ ಜನ ಈ ಭಾಷೆಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಸೂಕ್ತವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಹಿರಿಯ ಸಾಹಿತಿಗಳಾದ ಚನ್ನಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ರಾಜಣ್ಣ, ತಹಶಿಲ್ದಾರ್ ವಿಭಾ ರಾಥೋಡ್, ಡಿವೈಎಸ್ಪಿ ರವಿ, ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಹಾಗೂ ಕನ್ನಡಪರ ಚಿಂತಕರಾದ ಚುಂಚೇಗೌಡ, ರಾಮಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…