ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26 ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಭಾಗವಹಿಸಿದರು.
ನಂತರ ಮಾತನಾಡಿದ ಸಚಿವ, ಕನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ.
ಕನ್ನಡದದ ದಾರ್ಶನಿಕ ಕವಿಗಳಾದ ರನ್ನ , ಪಂಪ, ಕುವೆಂಪು ಹಾಗೂ ಜ್ಞಾನ ಪೀಠ ಪುರಸ್ಕೃತರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ದಾರಾಬೇಂದ್ರೆ, ಚಂದ್ರಶೇಖರ ಕಂಬಾರ, ಕುವೆಂಪು ಮುಂತಾದ ಕವಿಗಳು ಈ ನಾಡಿಗೆ ತನ್ನದೇ ಆದ ಕನ್ನಡ ಸೇವೆ ಮಾಡುವ ಮೂಲಕ ಅವರ ಸಾಹಿತ್ಯ ಹಾಗೂ ಕವನಗಳನ್ನು ಈ ನಾಡಿನ ಜನತೆಗೆ ಹಾಗೂ ಮುಂದಿನ ಪೀಳಿಗೆಗೆ ನೀಡಿದ್ದಾರೆ ಎಂದರು.
ಕನ್ನಡದ ಇತಿಹಾಸ ಈ ರಾಷ್ಟ್ರದ ಭಾಷೆಯಾಗಿದ್ದು, ಕನ್ನಡದ ಶಾಸನಗಳು ಐತಿಹಾಸಿಕವಾಗಿ ಹೆಸರುವಾಸಿಯಾಗಿವೆ.
ಈ ನೆಲ, ಜಲ, ಭಾಷೆ, ನಾಡಿಗಾಗಿ ನಾವು ಸದಾ ಜೊತೆಯಾಗಿ ಕೆಲಸಮಾಡಬೇಕಿದೆ ಎಂದರು.
ಕನ್ನಡದ ಪರಂಪರೆಯನ್ನು ಉಳಿಸಲು ನಮ್ಮ ಸರ್ಕಾರ ಬದ್ದವಾಗಿದ್ದು, ಈ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಲ್ಲಾ ರೀತಿಯ ಸಹಕಾರ ಹಾಗೂ ನೆರವನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ನಾವು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವುದಲ್ಲದೆ ನಮ್ಮ ಮುಂದಿನ ಪೀಳಿಗೆಯ ಜನ ಈ ಭಾಷೆಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಸೂಕ್ತವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಹಿರಿಯ ಸಾಹಿತಿಗಳಾದ ಚನ್ನಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ರಾಜಣ್ಣ, ತಹಶಿಲ್ದಾರ್ ವಿಭಾ ರಾಥೋಡ್, ಡಿವೈಎಸ್ಪಿ ರವಿ, ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಹಾಗೂ ಕನ್ನಡಪರ ಚಿಂತಕರಾದ ಚುಂಚೇಗೌಡ, ರಾಮಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…