ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26 ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಭಾಗವಹಿಸಿದರು.
ನಂತರ ಮಾತನಾಡಿದ ಸಚಿವ, ಕನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ.
ಕನ್ನಡದದ ದಾರ್ಶನಿಕ ಕವಿಗಳಾದ ರನ್ನ , ಪಂಪ, ಕುವೆಂಪು ಹಾಗೂ ಜ್ಞಾನ ಪೀಠ ಪುರಸ್ಕೃತರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ದಾರಾಬೇಂದ್ರೆ, ಚಂದ್ರಶೇಖರ ಕಂಬಾರ, ಕುವೆಂಪು ಮುಂತಾದ ಕವಿಗಳು ಈ ನಾಡಿಗೆ ತನ್ನದೇ ಆದ ಕನ್ನಡ ಸೇವೆ ಮಾಡುವ ಮೂಲಕ ಅವರ ಸಾಹಿತ್ಯ ಹಾಗೂ ಕವನಗಳನ್ನು ಈ ನಾಡಿನ ಜನತೆಗೆ ಹಾಗೂ ಮುಂದಿನ ಪೀಳಿಗೆಗೆ ನೀಡಿದ್ದಾರೆ ಎಂದರು.
ಕನ್ನಡದ ಇತಿಹಾಸ ಈ ರಾಷ್ಟ್ರದ ಭಾಷೆಯಾಗಿದ್ದು, ಕನ್ನಡದ ಶಾಸನಗಳು ಐತಿಹಾಸಿಕವಾಗಿ ಹೆಸರುವಾಸಿಯಾಗಿವೆ.
ಈ ನೆಲ, ಜಲ, ಭಾಷೆ, ನಾಡಿಗಾಗಿ ನಾವು ಸದಾ ಜೊತೆಯಾಗಿ ಕೆಲಸಮಾಡಬೇಕಿದೆ ಎಂದರು.
ಕನ್ನಡದ ಪರಂಪರೆಯನ್ನು ಉಳಿಸಲು ನಮ್ಮ ಸರ್ಕಾರ ಬದ್ದವಾಗಿದ್ದು, ಈ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಲ್ಲಾ ರೀತಿಯ ಸಹಕಾರ ಹಾಗೂ ನೆರವನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ನಾವು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವುದಲ್ಲದೆ ನಮ್ಮ ಮುಂದಿನ ಪೀಳಿಗೆಯ ಜನ ಈ ಭಾಷೆಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಸೂಕ್ತವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಹಿರಿಯ ಸಾಹಿತಿಗಳಾದ ಚನ್ನಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ರಾಜಣ್ಣ, ತಹಶಿಲ್ದಾರ್ ವಿಭಾ ರಾಥೋಡ್, ಡಿವೈಎಸ್ಪಿ ರವಿ, ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಹಾಗೂ ಕನ್ನಡಪರ ಚಿಂತಕರಾದ ಚುಂಚೇಗೌಡ, ರಾಮಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…