ಕನ್ನಡ ಭಾಷೆಯ ಪರಂಪರೆ ಮತ್ತು ಅನನ್ಯತೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅರಿಯಬೇಕಾಗಿದೆ. ಕನ್ನಡ ಭಾಷೆಯ ಅಧ್ಯಯನವೆಂದರೆ ಕನ್ನಡಿಗರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಧ್ಯಯನವಾಗುತ್ತದೆ ಎಂದು ಕವಿ ಚೆನ್ನಕೇಶವಮೂರ್ತಿ ತಿಳಿಸಿದರು.
ನಗರದ ಸರ್ಕಾರಿ ತೆಲುಗು ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮನುಷ್ಯನಲ್ಲಿ ಪರಿಸರದ ಭಾಷೆಯನ್ನು ಕಲಿಯುವ ಶಕ್ತಿ ಸಹಜವಾಗಿರುತ್ತದೆ. ಜಗತ್ತಿನ ಪ್ರಮುಖ ಭಾಷೆಗಳಲ್ಲಿ ಕನ್ನಡ ಭಾಷೆಗೆ ಮಹತ್ವದ ಸ್ಥಾನವಿದೆ. ಕನ್ನಡದ ಚಿಂತನೆಗಳನ್ನು ಅವಲೋಕಿಸಿದರೆ ಕನ್ನಡ ಮನಸ್ಸುಗಳು ಉದಾತ್ತ ಚಿಂತನೆಗಳಿಂದ ಕೂಡಿರುವುದು ಗೋಚರವಾಗುತ್ತವೆ. ಕನ್ನಡ ಜನಪದರು ಕಟ್ಟಿದ ಸಾಹಿತ್ಯ ಮತ್ತು ಕಲಾ ಪ್ರಕಾರಗಳು ಇಂದಿಗೂ ಜನಮನದಲ್ಲಿ ಮಹತ್ವದ ಸ್ಥಾನ ಪಡೆದಿವೆ ಎಂದರು.
ಮಾತೃಭಾಷೆಯಲ್ಲಿ ಕಲಿಯುವವರಿಗೆ ತಮ್ಮ ಭಾವನೆಗಳನ್ನು ಪರಿಣಾಮಕಾರಿ ಸಮಾಜಕ್ಕೆ ತಿಳಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಕನ್ನಡದ ಪ್ರಮುಖ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.ಪುಸ್ತಕ ಪ್ರೀತಿ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದರು.
ಸಿರಿಗನ್ನಡ ಸಂಭ್ರಮ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ಮತ್ತು ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸರ್ಕಾರಿ ತೆಲುಗು ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣಕಿಶೋರಕುಮಾರ್, ಅಧ್ಯಾಪಕರಾದ ಹನುಮಂತರಾಯಪ್ಪ, ಹೇಮಲತಾ, ಪುಟ್ಟಗಂಗಮ್ಮ, ಮಂಜುನಾಥ, ರೂಪ, ಕಲಾವತಿ, ವೆಂಕಟರಮಣರೆಡ್ಡಿ, ಹಳೆಯ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳಾದ ಕೆ.ಶ್ರೀನಿವಾಸಲು, ಸುಬ್ಬರಾವ್, ಜಗದೀಶ್, ನಟರಾಜ್, ಉಪೇಂದ್ರ, ಲಕ್ಷ್ಮೀನಾರಾಯಣ, ಅಶೋಕ, ನಾರಾಯಣಸ್ವಾಮಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…