ಕನ್ನಡ ಭಾಷಾ ಪರಂಪರೆ ಮತ್ತು ಅನನ್ಯತೆ ಬಗ್ಗೆ ವಿದ್ಯಾರ್ಥಿ ದೆಸೆಯಿಂದ ಅರಿಯಬೇಕು- ಕವಿ ಚೆನ್ನಕೇಶವಮೂರ್ತಿ

ಕನ್ನಡ ಭಾಷೆಯ ಪರಂಪರೆ ಮತ್ತು ಅನನ್ಯತೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅರಿಯಬೇಕಾಗಿದೆ. ಕನ್ನಡ ಭಾಷೆಯ ಅಧ್ಯಯನವೆಂದರೆ ಕನ್ನಡಿಗರ ಸಾಮಾಜಿಕ ಮತ್ತು ಸಾಂಸ್ಕೃತಿಕ  ಅಧ್ಯಯನವಾಗುತ್ತದೆ ಎಂದು ಕವಿ ಚೆನ್ನಕೇಶವಮೂರ್ತಿ ತಿಳಿಸಿದರು.

ನಗರದ  ಸರ್ಕಾರಿ ತೆಲುಗು ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮನುಷ್ಯನಲ್ಲಿ ಪರಿಸರದ ಭಾಷೆಯನ್ನು ಕಲಿಯುವ ಶಕ್ತಿ ಸಹಜವಾಗಿರುತ್ತದೆ. ಜಗತ್ತಿನ ಪ್ರಮುಖ ಭಾಷೆಗಳಲ್ಲಿ ಕನ್ನಡ ಭಾಷೆಗೆ ಮಹತ್ವದ ಸ್ಥಾನವಿದೆ.  ಕನ್ನಡದ ಚಿಂತನೆಗಳನ್ನು ಅವಲೋಕಿಸಿದರೆ ಕನ್ನಡ ಮನಸ್ಸುಗಳು ಉದಾತ್ತ ಚಿಂತನೆಗಳಿಂದ ಕೂಡಿರುವುದು ಗೋಚರವಾಗುತ್ತವೆ. ಕನ್ನಡ ಜನಪದರು ಕಟ್ಟಿದ ಸಾಹಿತ್ಯ ಮತ್ತು ‌ಕಲಾ ಪ್ರಕಾರಗಳು ಇಂದಿಗೂ ಜನಮನದಲ್ಲಿ  ಮಹತ್ವದ ಸ್ಥಾನ ಪಡೆದಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕ ಕೋಶಾಧ್ಯಕ್ಷ  ಜಿ.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಭಾಷೆಯನ್ನು ಪರಿಪೂರ್ಣವಾಗಿ ಕಲಿಯುವ ಕಡೆಗೆ ಆದ್ಯತೆ ನೀಡಬೇಕು. ಮಾತೃ ಭಾಷೆಯಲ್ಲಿ ಕಲಿಯುವ ಅಗತ್ಯವನ್ನು ಶಿಕ್ಷಣ ತಜ್ಞರು ಪ್ರತಿಪಾದಿಸಿದ್ದಾರೆ.

ಮಾತೃಭಾಷೆಯಲ್ಲಿ ಕಲಿಯುವವರಿಗೆ ತಮ್ಮ ಭಾವನೆಗಳನ್ನು ಪರಿಣಾಮಕಾರಿ ಸಮಾಜಕ್ಕೆ ತಿಳಿಸಲು ಸಾಧ್ಯವಾಗುತ್ತದೆ.  ವಿದ್ಯಾರ್ಥಿಗಳು ಪಠ್ಯದೊಂದಿಗೆ ಕನ್ನಡದ ಪ್ರಮುಖ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.ಪುಸ್ತಕ ಪ್ರೀತಿ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದರು.

ಸಿರಿಗನ್ನಡ ಸಂಭ್ರಮ ಸಮಾರಂಭದಲ್ಲಿ  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ಮತ್ತು ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸರ್ಕಾರಿ ತೆಲುಗು ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣಕಿಶೋರಕುಮಾರ್, ಅಧ್ಯಾಪಕರಾದ ಹನುಮಂತರಾಯಪ್ಪ, ಹೇಮಲತಾ, ಪುಟ್ಟಗಂಗಮ್ಮ, ಮಂಜುನಾಥ, ರೂಪ, ಕಲಾವತಿ, ವೆಂಕಟರಮಣರೆಡ್ಡಿ, ಹಳೆಯ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳಾದ ಕೆ.ಶ್ರೀನಿವಾಸಲು, ಸುಬ್ಬರಾವ್, ಜಗದೀಶ್, ನಟರಾಜ್, ಉಪೇಂದ್ರ, ಲಕ್ಷ್ಮೀನಾರಾಯಣ, ಅಶೋಕ, ನಾರಾಯಣಸ್ವಾಮಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

1 hour ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago