ಕನ್ನಡ ಭಾಷಾ ಪರಂಪರೆ ಮತ್ತು ಅನನ್ಯತೆ ಬಗ್ಗೆ ವಿದ್ಯಾರ್ಥಿ ದೆಸೆಯಿಂದ ಅರಿಯಬೇಕು- ಕವಿ ಚೆನ್ನಕೇಶವಮೂರ್ತಿ

ಕನ್ನಡ ಭಾಷೆಯ ಪರಂಪರೆ ಮತ್ತು ಅನನ್ಯತೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅರಿಯಬೇಕಾಗಿದೆ. ಕನ್ನಡ ಭಾಷೆಯ ಅಧ್ಯಯನವೆಂದರೆ ಕನ್ನಡಿಗರ ಸಾಮಾಜಿಕ ಮತ್ತು ಸಾಂಸ್ಕೃತಿಕ  ಅಧ್ಯಯನವಾಗುತ್ತದೆ ಎಂದು ಕವಿ ಚೆನ್ನಕೇಶವಮೂರ್ತಿ ತಿಳಿಸಿದರು.

ನಗರದ  ಸರ್ಕಾರಿ ತೆಲುಗು ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮನುಷ್ಯನಲ್ಲಿ ಪರಿಸರದ ಭಾಷೆಯನ್ನು ಕಲಿಯುವ ಶಕ್ತಿ ಸಹಜವಾಗಿರುತ್ತದೆ. ಜಗತ್ತಿನ ಪ್ರಮುಖ ಭಾಷೆಗಳಲ್ಲಿ ಕನ್ನಡ ಭಾಷೆಗೆ ಮಹತ್ವದ ಸ್ಥಾನವಿದೆ.  ಕನ್ನಡದ ಚಿಂತನೆಗಳನ್ನು ಅವಲೋಕಿಸಿದರೆ ಕನ್ನಡ ಮನಸ್ಸುಗಳು ಉದಾತ್ತ ಚಿಂತನೆಗಳಿಂದ ಕೂಡಿರುವುದು ಗೋಚರವಾಗುತ್ತವೆ. ಕನ್ನಡ ಜನಪದರು ಕಟ್ಟಿದ ಸಾಹಿತ್ಯ ಮತ್ತು ‌ಕಲಾ ಪ್ರಕಾರಗಳು ಇಂದಿಗೂ ಜನಮನದಲ್ಲಿ  ಮಹತ್ವದ ಸ್ಥಾನ ಪಡೆದಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕ ಕೋಶಾಧ್ಯಕ್ಷ  ಜಿ.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಭಾಷೆಯನ್ನು ಪರಿಪೂರ್ಣವಾಗಿ ಕಲಿಯುವ ಕಡೆಗೆ ಆದ್ಯತೆ ನೀಡಬೇಕು. ಮಾತೃ ಭಾಷೆಯಲ್ಲಿ ಕಲಿಯುವ ಅಗತ್ಯವನ್ನು ಶಿಕ್ಷಣ ತಜ್ಞರು ಪ್ರತಿಪಾದಿಸಿದ್ದಾರೆ.

ಮಾತೃಭಾಷೆಯಲ್ಲಿ ಕಲಿಯುವವರಿಗೆ ತಮ್ಮ ಭಾವನೆಗಳನ್ನು ಪರಿಣಾಮಕಾರಿ ಸಮಾಜಕ್ಕೆ ತಿಳಿಸಲು ಸಾಧ್ಯವಾಗುತ್ತದೆ.  ವಿದ್ಯಾರ್ಥಿಗಳು ಪಠ್ಯದೊಂದಿಗೆ ಕನ್ನಡದ ಪ್ರಮುಖ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.ಪುಸ್ತಕ ಪ್ರೀತಿ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದರು.

ಸಿರಿಗನ್ನಡ ಸಂಭ್ರಮ ಸಮಾರಂಭದಲ್ಲಿ  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ಮತ್ತು ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸರ್ಕಾರಿ ತೆಲುಗು ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣಕಿಶೋರಕುಮಾರ್, ಅಧ್ಯಾಪಕರಾದ ಹನುಮಂತರಾಯಪ್ಪ, ಹೇಮಲತಾ, ಪುಟ್ಟಗಂಗಮ್ಮ, ಮಂಜುನಾಥ, ರೂಪ, ಕಲಾವತಿ, ವೆಂಕಟರಮಣರೆಡ್ಡಿ, ಹಳೆಯ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳಾದ ಕೆ.ಶ್ರೀನಿವಾಸಲು, ಸುಬ್ಬರಾವ್, ಜಗದೀಶ್, ನಟರಾಜ್, ಉಪೇಂದ್ರ, ಲಕ್ಷ್ಮೀನಾರಾಯಣ, ಅಶೋಕ, ನಾರಾಯಣಸ್ವಾಮಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

13 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago