ಕನ್ನಡ ಭಾಷಾ ಪರಂಪರೆ ಮತ್ತು ಅನನ್ಯತೆ ಬಗ್ಗೆ ವಿದ್ಯಾರ್ಥಿ ದೆಸೆಯಿಂದ ಅರಿಯಬೇಕು- ಕವಿ ಚೆನ್ನಕೇಶವಮೂರ್ತಿ

ಕನ್ನಡ ಭಾಷೆಯ ಪರಂಪರೆ ಮತ್ತು ಅನನ್ಯತೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅರಿಯಬೇಕಾಗಿದೆ. ಕನ್ನಡ ಭಾಷೆಯ ಅಧ್ಯಯನವೆಂದರೆ ಕನ್ನಡಿಗರ ಸಾಮಾಜಿಕ ಮತ್ತು ಸಾಂಸ್ಕೃತಿಕ  ಅಧ್ಯಯನವಾಗುತ್ತದೆ ಎಂದು ಕವಿ ಚೆನ್ನಕೇಶವಮೂರ್ತಿ ತಿಳಿಸಿದರು.

ನಗರದ  ಸರ್ಕಾರಿ ತೆಲುಗು ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮನುಷ್ಯನಲ್ಲಿ ಪರಿಸರದ ಭಾಷೆಯನ್ನು ಕಲಿಯುವ ಶಕ್ತಿ ಸಹಜವಾಗಿರುತ್ತದೆ. ಜಗತ್ತಿನ ಪ್ರಮುಖ ಭಾಷೆಗಳಲ್ಲಿ ಕನ್ನಡ ಭಾಷೆಗೆ ಮಹತ್ವದ ಸ್ಥಾನವಿದೆ.  ಕನ್ನಡದ ಚಿಂತನೆಗಳನ್ನು ಅವಲೋಕಿಸಿದರೆ ಕನ್ನಡ ಮನಸ್ಸುಗಳು ಉದಾತ್ತ ಚಿಂತನೆಗಳಿಂದ ಕೂಡಿರುವುದು ಗೋಚರವಾಗುತ್ತವೆ. ಕನ್ನಡ ಜನಪದರು ಕಟ್ಟಿದ ಸಾಹಿತ್ಯ ಮತ್ತು ‌ಕಲಾ ಪ್ರಕಾರಗಳು ಇಂದಿಗೂ ಜನಮನದಲ್ಲಿ  ಮಹತ್ವದ ಸ್ಥಾನ ಪಡೆದಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕ ಕೋಶಾಧ್ಯಕ್ಷ  ಜಿ.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಭಾಷೆಯನ್ನು ಪರಿಪೂರ್ಣವಾಗಿ ಕಲಿಯುವ ಕಡೆಗೆ ಆದ್ಯತೆ ನೀಡಬೇಕು. ಮಾತೃ ಭಾಷೆಯಲ್ಲಿ ಕಲಿಯುವ ಅಗತ್ಯವನ್ನು ಶಿಕ್ಷಣ ತಜ್ಞರು ಪ್ರತಿಪಾದಿಸಿದ್ದಾರೆ.

ಮಾತೃಭಾಷೆಯಲ್ಲಿ ಕಲಿಯುವವರಿಗೆ ತಮ್ಮ ಭಾವನೆಗಳನ್ನು ಪರಿಣಾಮಕಾರಿ ಸಮಾಜಕ್ಕೆ ತಿಳಿಸಲು ಸಾಧ್ಯವಾಗುತ್ತದೆ.  ವಿದ್ಯಾರ್ಥಿಗಳು ಪಠ್ಯದೊಂದಿಗೆ ಕನ್ನಡದ ಪ್ರಮುಖ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.ಪುಸ್ತಕ ಪ್ರೀತಿ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದರು.

ಸಿರಿಗನ್ನಡ ಸಂಭ್ರಮ ಸಮಾರಂಭದಲ್ಲಿ  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ಮತ್ತು ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸರ್ಕಾರಿ ತೆಲುಗು ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣಕಿಶೋರಕುಮಾರ್, ಅಧ್ಯಾಪಕರಾದ ಹನುಮಂತರಾಯಪ್ಪ, ಹೇಮಲತಾ, ಪುಟ್ಟಗಂಗಮ್ಮ, ಮಂಜುನಾಥ, ರೂಪ, ಕಲಾವತಿ, ವೆಂಕಟರಮಣರೆಡ್ಡಿ, ಹಳೆಯ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳಾದ ಕೆ.ಶ್ರೀನಿವಾಸಲು, ಸುಬ್ಬರಾವ್, ಜಗದೀಶ್, ನಟರಾಜ್, ಉಪೇಂದ್ರ, ಲಕ್ಷ್ಮೀನಾರಾಯಣ, ಅಶೋಕ, ನಾರಾಯಣಸ್ವಾಮಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

2 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

24 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago