ಕನ್ನಡ ಭಾಷಾ ಪರಂಪರೆ ಮತ್ತು ಅನನ್ಯತೆ ಬಗ್ಗೆ ವಿದ್ಯಾರ್ಥಿ ದೆಸೆಯಿಂದ ಅರಿಯಬೇಕು- ಕವಿ ಚೆನ್ನಕೇಶವಮೂರ್ತಿ

ಕನ್ನಡ ಭಾಷೆಯ ಪರಂಪರೆ ಮತ್ತು ಅನನ್ಯತೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅರಿಯಬೇಕಾಗಿದೆ. ಕನ್ನಡ ಭಾಷೆಯ ಅಧ್ಯಯನವೆಂದರೆ ಕನ್ನಡಿಗರ ಸಾಮಾಜಿಕ ಮತ್ತು ಸಾಂಸ್ಕೃತಿಕ  ಅಧ್ಯಯನವಾಗುತ್ತದೆ ಎಂದು ಕವಿ ಚೆನ್ನಕೇಶವಮೂರ್ತಿ ತಿಳಿಸಿದರು.

ನಗರದ  ಸರ್ಕಾರಿ ತೆಲುಗು ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮನುಷ್ಯನಲ್ಲಿ ಪರಿಸರದ ಭಾಷೆಯನ್ನು ಕಲಿಯುವ ಶಕ್ತಿ ಸಹಜವಾಗಿರುತ್ತದೆ. ಜಗತ್ತಿನ ಪ್ರಮುಖ ಭಾಷೆಗಳಲ್ಲಿ ಕನ್ನಡ ಭಾಷೆಗೆ ಮಹತ್ವದ ಸ್ಥಾನವಿದೆ.  ಕನ್ನಡದ ಚಿಂತನೆಗಳನ್ನು ಅವಲೋಕಿಸಿದರೆ ಕನ್ನಡ ಮನಸ್ಸುಗಳು ಉದಾತ್ತ ಚಿಂತನೆಗಳಿಂದ ಕೂಡಿರುವುದು ಗೋಚರವಾಗುತ್ತವೆ. ಕನ್ನಡ ಜನಪದರು ಕಟ್ಟಿದ ಸಾಹಿತ್ಯ ಮತ್ತು ‌ಕಲಾ ಪ್ರಕಾರಗಳು ಇಂದಿಗೂ ಜನಮನದಲ್ಲಿ  ಮಹತ್ವದ ಸ್ಥಾನ ಪಡೆದಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕ ಕೋಶಾಧ್ಯಕ್ಷ  ಜಿ.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಭಾಷೆಯನ್ನು ಪರಿಪೂರ್ಣವಾಗಿ ಕಲಿಯುವ ಕಡೆಗೆ ಆದ್ಯತೆ ನೀಡಬೇಕು. ಮಾತೃ ಭಾಷೆಯಲ್ಲಿ ಕಲಿಯುವ ಅಗತ್ಯವನ್ನು ಶಿಕ್ಷಣ ತಜ್ಞರು ಪ್ರತಿಪಾದಿಸಿದ್ದಾರೆ.

ಮಾತೃಭಾಷೆಯಲ್ಲಿ ಕಲಿಯುವವರಿಗೆ ತಮ್ಮ ಭಾವನೆಗಳನ್ನು ಪರಿಣಾಮಕಾರಿ ಸಮಾಜಕ್ಕೆ ತಿಳಿಸಲು ಸಾಧ್ಯವಾಗುತ್ತದೆ.  ವಿದ್ಯಾರ್ಥಿಗಳು ಪಠ್ಯದೊಂದಿಗೆ ಕನ್ನಡದ ಪ್ರಮುಖ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.ಪುಸ್ತಕ ಪ್ರೀತಿ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದರು.

ಸಿರಿಗನ್ನಡ ಸಂಭ್ರಮ ಸಮಾರಂಭದಲ್ಲಿ  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ಮತ್ತು ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸರ್ಕಾರಿ ತೆಲುಗು ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣಕಿಶೋರಕುಮಾರ್, ಅಧ್ಯಾಪಕರಾದ ಹನುಮಂತರಾಯಪ್ಪ, ಹೇಮಲತಾ, ಪುಟ್ಟಗಂಗಮ್ಮ, ಮಂಜುನಾಥ, ರೂಪ, ಕಲಾವತಿ, ವೆಂಕಟರಮಣರೆಡ್ಡಿ, ಹಳೆಯ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳಾದ ಕೆ.ಶ್ರೀನಿವಾಸಲು, ಸುಬ್ಬರಾವ್, ಜಗದೀಶ್, ನಟರಾಜ್, ಉಪೇಂದ್ರ, ಲಕ್ಷ್ಮೀನಾರಾಯಣ, ಅಶೋಕ, ನಾರಾಯಣಸ್ವಾಮಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

10 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

10 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

11 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

15 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

16 hours ago