ಕನ್ನಡ ಭಾಷೆಯಲ್ಲಿ ವಾದ ಮಂಡನೆ, ತೀರ್ಪು ನೀಡಿದರೆ ಹೆಚ್ಚು ಪರಿಣಾಮಕಾರಿಗಿರಲಿದೆ- ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್

ನ್ಯಾಯಾಲಯಗಳಲ್ಲಿ ಮಾತೃಭಾಷೆಯಾದ ಕನ್ನಡ ಭಾಷೆಯಲ್ಲಿ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ  ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು.

ದೊಡ್ಡಬಳ್ಳಾಪುರ ನಗರದ ಕೋರ್ಟ್ ಆವರಣದಲ್ಲಿ ತಾಲೂಕು ವಕೀಲರ‌ ಸಂಘದ ವತಿಯಿಂದ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಹಾಗೂ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೊಡ್ಡಬಳ್ಳಾಪುರ ಒಂದು ಐತಿಹಾಸಿಕ ಹಿನ್ನೆಲೆ ಇರುವ ಸ್ಥಳವಾಗಿದ್ದು ವಕೀಲರ ಸಂಘದ ಈ ಕಾರ್ಯಕ್ರಮವು ಇತಿಹಾಸದ ಪುಟಗಳಲ್ಲಿ ಸೇರುತ್ತದೆ. ಕನ್ನಡಿಗರಾಗಿ ನಾವು ಕರ್ನಾಟಕದಲ್ಲಿ ಜನ್ಮ ಪಡೆದಿರುವುದು ನಮ್ಮ ಪುಣ್ಯ. ನ್ಯಾಯಾಲಯಗಳಲ್ಲಿ ಕನ್ನಡ ಭಾಷೆ ಬಳಕೆ ಇದ್ದು, ಕನ್ನಡ ಭಾಷೆಯಲ್ಲಿ ತೀರ್ಪು ಬರೆಯುವ ಹಲವು ಜಡ್ಜ್ ಗಳಿಗೆ ಸನ್ಮಾನಿಸಿ ಗೌರವಿಸುವ ಅಭ್ಯಾಸ ತುಂಬಾ ಸಂತಸದ ವಿಷಯವಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗಿಂತ ದೊಡ್ಡಬಳ್ಳಾಪುರ ನ್ಯಾಯಾಲಯ ಸುಸಜ್ಜಿತವಾಗಿದೆ. ವಕೀಲರ‌ ಸಂಘಕ್ಕೆ ಹೊಸ ಕಟ್ಟಡದ ಅಗತ್ಯವಿದ್ದು, ಶೀಘ್ರವೇ ಹೊಸ ಕಟ್ಟಡ‌ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ನಂತರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ‌ ಮಾವಿನಕುಂಟೆ ಮಾತನಾಡಿ, ಈ ಕಾರ್ಯಕ್ರಮ ತುಂಬಾ ವಿಶೇಷವಾದದ್ದು, ಕಾರಣ, ವಕೀಲರ ದಿನಾಚರಣೆ ಜೊತೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ಎಲ್ಲರ ಸಹಕಾರದಿಂದ ಇಂದಿನ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಕನ್ನಡ ಭಾಷೆ ಜೇನಿನಂತೆ ಸವಿದಷ್ಟು ಸಿಹಿ. ಹೊರ ರಾಜ್ಯಗಳಿಂದ ಬಂದು ಜೀವನ ಕಟ್ಟಿಕೊಂಡಿರುವ  ಸಾವಿರಾರು ಕುಟುಂಬಗಳಿಗೆ ನಮ್ಮ ನಾಡಿನ ಸವಲತ್ತು ಬೇಕಿದೆ ಭಾಷೆ ಬೇಡವಾಗಿದೆ ಈ ನಡವಳಿಕೆ ಬದಲಾಗಬೇಕಿದೆ ಎಂದರು.

ಕೇವಲ ವಾಣಿಜ್ಯ ವಿಚಾರಕ್ಕಾಗಿ ಕನ್ನಡ ಭಾಷೆಯನ್ನು ತಾತ್ಸಾರ ಮಾಡುವ ನಮ್ಮ ನಾಡಿನ ವ್ಯಾಪಾರಸ್ಥರಿಗೆ ನಾಚಿಕೆಯಾಗಬೇಕು. ನಮ್ಮ ಮಾತೃಭಾಷೆಯನ್ನು ಬಿಟ್ಟು ಪರ ಭಾಷೆ ಬಳಸಲು ಮುಂದಾಗಿರುವ ವರ್ತನೆ ಕೂಡಲೇ ನಿಲ್ಲಬೇಕಿದೆ. ಮೊದಲು ಎಲ್ಲಾ ಕನ್ನಡಿಗರಲ್ಲಿ ನನ್ನ ನಾಡು ನನ್ನ ಭಾಷೆ ಎಂಬ ಭಾವನೆ ಮೂಡಬೇಕಿದೆ. ನಮ್ಮ ಅಸ್ತಿತ್ವ ನಮ್ಮ ಭಾಷೆ ನಮ್ಮ ಅಳಿವು ಉಳಿವು ನಮ್ಮ ನಾಡು ನುಡಿಯ ಅಭಿವೃದ್ಧಿಯಲ್ಲಿದೆ ಎಂಬುದು ನಮ್ಮ ಅರಿವಿಗೆ ಬರಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಕೀಲ ಪ್ರಭಾಕರ್ ರಾಜು ಸಂಪಾದಿಸಿರುವ ಕವನ ಸಂಕಲನ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ  ಎ.ಪಿ.ರಂಗನಾಥ್, ಶಿವಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ , ಪತ್ರಕರ್ತರಾದ ರವಿಕಿರಣ್, ನಟರು ವಾಗ್ಮಿಗಳು ಆದ ಮಹಾದೇವ್ , ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

7 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

11 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

20 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago