ಕನ್ನಡ ಭಾಷೆಯಲ್ಲಿ ವಾದ ಮಂಡನೆ, ತೀರ್ಪು ನೀಡಿದರೆ ಹೆಚ್ಚು ಪರಿಣಾಮಕಾರಿಗಿರಲಿದೆ- ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್

ನ್ಯಾಯಾಲಯಗಳಲ್ಲಿ ಮಾತೃಭಾಷೆಯಾದ ಕನ್ನಡ ಭಾಷೆಯಲ್ಲಿ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ  ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು.

ದೊಡ್ಡಬಳ್ಳಾಪುರ ನಗರದ ಕೋರ್ಟ್ ಆವರಣದಲ್ಲಿ ತಾಲೂಕು ವಕೀಲರ‌ ಸಂಘದ ವತಿಯಿಂದ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಹಾಗೂ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೊಡ್ಡಬಳ್ಳಾಪುರ ಒಂದು ಐತಿಹಾಸಿಕ ಹಿನ್ನೆಲೆ ಇರುವ ಸ್ಥಳವಾಗಿದ್ದು ವಕೀಲರ ಸಂಘದ ಈ ಕಾರ್ಯಕ್ರಮವು ಇತಿಹಾಸದ ಪುಟಗಳಲ್ಲಿ ಸೇರುತ್ತದೆ. ಕನ್ನಡಿಗರಾಗಿ ನಾವು ಕರ್ನಾಟಕದಲ್ಲಿ ಜನ್ಮ ಪಡೆದಿರುವುದು ನಮ್ಮ ಪುಣ್ಯ. ನ್ಯಾಯಾಲಯಗಳಲ್ಲಿ ಕನ್ನಡ ಭಾಷೆ ಬಳಕೆ ಇದ್ದು, ಕನ್ನಡ ಭಾಷೆಯಲ್ಲಿ ತೀರ್ಪು ಬರೆಯುವ ಹಲವು ಜಡ್ಜ್ ಗಳಿಗೆ ಸನ್ಮಾನಿಸಿ ಗೌರವಿಸುವ ಅಭ್ಯಾಸ ತುಂಬಾ ಸಂತಸದ ವಿಷಯವಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗಿಂತ ದೊಡ್ಡಬಳ್ಳಾಪುರ ನ್ಯಾಯಾಲಯ ಸುಸಜ್ಜಿತವಾಗಿದೆ. ವಕೀಲರ‌ ಸಂಘಕ್ಕೆ ಹೊಸ ಕಟ್ಟಡದ ಅಗತ್ಯವಿದ್ದು, ಶೀಘ್ರವೇ ಹೊಸ ಕಟ್ಟಡ‌ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ನಂತರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ‌ ಮಾವಿನಕುಂಟೆ ಮಾತನಾಡಿ, ಈ ಕಾರ್ಯಕ್ರಮ ತುಂಬಾ ವಿಶೇಷವಾದದ್ದು, ಕಾರಣ, ವಕೀಲರ ದಿನಾಚರಣೆ ಜೊತೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ಎಲ್ಲರ ಸಹಕಾರದಿಂದ ಇಂದಿನ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಕನ್ನಡ ಭಾಷೆ ಜೇನಿನಂತೆ ಸವಿದಷ್ಟು ಸಿಹಿ. ಹೊರ ರಾಜ್ಯಗಳಿಂದ ಬಂದು ಜೀವನ ಕಟ್ಟಿಕೊಂಡಿರುವ  ಸಾವಿರಾರು ಕುಟುಂಬಗಳಿಗೆ ನಮ್ಮ ನಾಡಿನ ಸವಲತ್ತು ಬೇಕಿದೆ ಭಾಷೆ ಬೇಡವಾಗಿದೆ ಈ ನಡವಳಿಕೆ ಬದಲಾಗಬೇಕಿದೆ ಎಂದರು.

ಕೇವಲ ವಾಣಿಜ್ಯ ವಿಚಾರಕ್ಕಾಗಿ ಕನ್ನಡ ಭಾಷೆಯನ್ನು ತಾತ್ಸಾರ ಮಾಡುವ ನಮ್ಮ ನಾಡಿನ ವ್ಯಾಪಾರಸ್ಥರಿಗೆ ನಾಚಿಕೆಯಾಗಬೇಕು. ನಮ್ಮ ಮಾತೃಭಾಷೆಯನ್ನು ಬಿಟ್ಟು ಪರ ಭಾಷೆ ಬಳಸಲು ಮುಂದಾಗಿರುವ ವರ್ತನೆ ಕೂಡಲೇ ನಿಲ್ಲಬೇಕಿದೆ. ಮೊದಲು ಎಲ್ಲಾ ಕನ್ನಡಿಗರಲ್ಲಿ ನನ್ನ ನಾಡು ನನ್ನ ಭಾಷೆ ಎಂಬ ಭಾವನೆ ಮೂಡಬೇಕಿದೆ. ನಮ್ಮ ಅಸ್ತಿತ್ವ ನಮ್ಮ ಭಾಷೆ ನಮ್ಮ ಅಳಿವು ಉಳಿವು ನಮ್ಮ ನಾಡು ನುಡಿಯ ಅಭಿವೃದ್ಧಿಯಲ್ಲಿದೆ ಎಂಬುದು ನಮ್ಮ ಅರಿವಿಗೆ ಬರಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಕೀಲ ಪ್ರಭಾಕರ್ ರಾಜು ಸಂಪಾದಿಸಿರುವ ಕವನ ಸಂಕಲನ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ  ಎ.ಪಿ.ರಂಗನಾಥ್, ಶಿವಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ , ಪತ್ರಕರ್ತರಾದ ರವಿಕಿರಣ್, ನಟರು ವಾಗ್ಮಿಗಳು ಆದ ಮಹಾದೇವ್ , ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

2 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

7 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

8 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

10 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

13 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago