ಕನ್ನಡ ಭಾಷೆ ಉಳಿಸಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ- ಜೆಡಿಎಸ್ ಮುಖಂಡ ಹರೀಶ್ ಗೌಡ

ಕನ್ನಡದ ಭಾಷೆ ಸಂಸ್ಕೃತಿ ಉಳಿಸಲು ನಾವು ನಮ್ಮ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ. ಇದಕ್ಕೆ‌ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ನಗರದ ಭಗತ್ ಸಿಂಗ್ ಮೈದಾನದಲ್ಲಿ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕರ್ನಾಟಕವನ್ನು 1956ರಲ್ಲಿ ಏಕೀಕರಣಗೋಳಿಸಿ ಕನ್ನಡ ನಾಡುನುಡಿ ಉಳಿಯಲು ಹಲವಾರು ಕನ್ನಡ ಹೋರಾಟಗಾರರ ಮಾರ್ಗದರ್ಶದ ಫಲವಾಗಿ ಕರ್ನಾಟಕ ರಾಜ್ಯೊತ್ಸವ ಆಚರಣೆಗೆ ಕಾರಣವಾಗಿದೆ. ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ದೇಶದ ಎಲ್ಲ ರಾಜ್ಯದ ಜನರು ಹಾಗೂ ದೇಶ ವಿದೇಶದ ಜನರು ಬಂದು ವಾಸವಾಗಿದ್ದಾರೆ. ನಾವು ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ. ಕನ್ನಡ ಭಾಷೆಯನ್ನು ಭಾರತ ರಾಷ್ಟ್ರ ಭಾಷೆಯನ್ನಾಗಿ ಮಾಡುವುದು ಅತಿ ಅವಶ್ಯವಿದೆ ಹಾಗೂ ಎಲ್ಲ ಸಂಘಟನೆಗಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಯಿತು. ಕರ್ನಾಟಕದಲ್ಲಿ ಕನ್ನಡ  ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ  ಅಗ್ರ ಸ್ಥಾನ ಇರಲೇಬೇಕು.  ಪ್ರತಿಯೊಬ್ಬ ಕನ್ನಡಿಗರಲ್ಲೂ  ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ ಕನ್ನಡದ ಕೆಲಸ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ 5 ಕಿ.ಲೋ ಮೀಟರ್ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಭವನದ ಅಧ್ಯಕ್ಷ ಕೆ.ವೆಂಕಟೇಶ್. ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಮುಖಂಡರಾದ ಕೆ.ಪಿ ಜಗನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

3 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

15 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

16 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago