ಕನ್ನಡ ಭಾಷೆ ಬಳಸಿ ಕನ್ನಡಾಭಿಮಾನ ಮೆರೆಯಬೇಕು- ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ

ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡಾಭಿಮಾನ ಮೆರೆಯಬೇಕಾಗಿದೆ. ಕನ್ನಡ ಭಾಷೆಯನ್ನು ಬಳಸಿದಾಗ ಮಾತ್ರ ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು  ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ನಗರದ ಶ್ರೀ ವಾಣಿ ಪದವಿಪೂರ್ವ ಕಾಲೇಜಿನಲ್ಲಿ    ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷೆ ಮತ್ತು ಐಚ್ಛಿಕ ಕನ್ನಡ ವಿಷಯದಲ್ಲಿ 100 ಅಂಕಗಳಿಗೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ಮಾತೃಭಾಷೆಗೆ ಅಪಾರ ಶಕ್ತಿ ಇರುತ್ತದೆ. ಮಾತೃಭಾಷೆಯ ಮೂಲಕ ಕಲಿಯುವಾಗ ಕಲಿಕೆಯು ಹೆಚ್ಚು ಪರಿಣಾಮಕಾರಿ ಆಗಿರುತ್ತದೆ. ಭಾಷಾ ಸಂಪತ್ತು ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿ ಆಗಲಿದೆ‌ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಕನ್ನಡವೇ ಶಿಕ್ಷಣ ಮಾಧ್ಯಮವಾಗಬೇಕು.  ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಸ್ನಾತಕೋತ್ತರ ಶಿಕ್ಷಣದವರೆಗೂ ಕನ್ನಡದಲ್ಲೇ ಬೋಧನೆ, ಸಂಶೋಧನೆ ನಡೆಯಬೇಕಾಗಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ  ಭವ್ಯ ಪರಂಪರೆ ಇದೆ. ಈ ಭವ್ಯ ಪರಂಪರೆಯನ್ನು ಮುಂದುವರೆಸಲು ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.

ಶ್ರೀ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ವೇಣುಗೋಪಾಲ್ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು  ಉತ್ತಮ ಸಾಧನೆ ಮಾಡಲು ಅವಕಾಶವಿದೆ. ಸಾಧನೆ ಮಾಡುವ ಪ್ರತಿಭಾವಂತರಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅವಕಾಶಗಳಿಗೆ. ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳಾದ  ಎನ್.ಶ್ರೀನಿವಾಸ್, ಬಾಲಕೃಷ್ಣ, ಶಶಾಂಕ್, ಮುನಿರಾಜು,  ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಭಾರತ ಸೇವಾದಳ ಅಧಿಕಾರಿ ಎಸ್.ಬೋರಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿಗಳಾದ ಕೋದಂಡರಾಮ್, ಷಫೀರ್, ಕಸಬಾ ಹೋಬಳಿ ಕಸಾಪ  ಘಟಕದ ಅಧ್ಯಕ್ಷ ದಾದಾಪೀರ್, ಗೌರವ ಕಾರ್ಯದರ್ಶಿ ಗಿರೀಶ್ ಬರಗೂರು, ತೂಬಗರೆ ಕಸಾಪ ಘಟಕದ ಗೌರವ ಕಾರ್ಯದರ್ಶಿ ಉದಯರಾಧ್ಯ, ಶ್ರೀ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 hour ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago