ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡಾಭಿಮಾನ ಮೆರೆಯಬೇಕಾಗಿದೆ. ಕನ್ನಡ ಭಾಷೆಯನ್ನು ಬಳಸಿದಾಗ ಮಾತ್ರ ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.
ನಗರದ ಶ್ರೀ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷೆ ಮತ್ತು ಐಚ್ಛಿಕ ಕನ್ನಡ ವಿಷಯದಲ್ಲಿ 100 ಅಂಕಗಳಿಗೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಮಾತೃಭಾಷೆಗೆ ಅಪಾರ ಶಕ್ತಿ ಇರುತ್ತದೆ. ಮಾತೃಭಾಷೆಯ ಮೂಲಕ ಕಲಿಯುವಾಗ ಕಲಿಕೆಯು ಹೆಚ್ಚು ಪರಿಣಾಮಕಾರಿ ಆಗಿರುತ್ತದೆ. ಭಾಷಾ ಸಂಪತ್ತು ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿ ಆಗಲಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಕನ್ನಡವೇ ಶಿಕ್ಷಣ ಮಾಧ್ಯಮವಾಗಬೇಕು. ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಸ್ನಾತಕೋತ್ತರ ಶಿಕ್ಷಣದವರೆಗೂ ಕನ್ನಡದಲ್ಲೇ ಬೋಧನೆ, ಸಂಶೋಧನೆ ನಡೆಯಬೇಕಾಗಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ. ಈ ಭವ್ಯ ಪರಂಪರೆಯನ್ನು ಮುಂದುವರೆಸಲು ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.
ಶ್ರೀ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ವೇಣುಗೋಪಾಲ್ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅವಕಾಶವಿದೆ. ಸಾಧನೆ ಮಾಡುವ ಪ್ರತಿಭಾವಂತರಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅವಕಾಶಗಳಿಗೆ. ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳಾದ ಎನ್.ಶ್ರೀನಿವಾಸ್, ಬಾಲಕೃಷ್ಣ, ಶಶಾಂಕ್, ಮುನಿರಾಜು, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಭಾರತ ಸೇವಾದಳ ಅಧಿಕಾರಿ ಎಸ್.ಬೋರಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿಗಳಾದ ಕೋದಂಡರಾಮ್, ಷಫೀರ್, ಕಸಬಾ ಹೋಬಳಿ ಕಸಾಪ ಘಟಕದ ಅಧ್ಯಕ್ಷ ದಾದಾಪೀರ್, ಗೌರವ ಕಾರ್ಯದರ್ಶಿ ಗಿರೀಶ್ ಬರಗೂರು, ತೂಬಗರೆ ಕಸಾಪ ಘಟಕದ ಗೌರವ ಕಾರ್ಯದರ್ಶಿ ಉದಯರಾಧ್ಯ, ಶ್ರೀ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…