Categories: ಲೇಖನ

ಕನ್ನಡ ಭಾಷೆ ಮತ್ತು ಸಾಮಾಜಿಕ ಜಾಲತಾಣಗಳು…….

ಸಾಮಾಜಿಕ ಜಾಲತಾಣಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲೆ ಬೀರಿದ ಪ್ರಭಾವ…………..

ಸುಮಾರು 10/15 ವರ್ಷಗಳ ಹಿಂದೆ ಇದ್ದ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಆತಂಕ ಈಗ ಅಷ್ಟಾಗಿ ಕಾಣುತ್ತಿಲ್ಲ. ಫೇಸ್ ಬುಕ್, ವಾಟ್ಸ್ ಆಪ್, ಎಕ್ಸ್, ಇನ್ಸ್ಟಾಗ್ರಾಂ ಮುಂತಾದ ಜಾಲತಾಣಗಳ ಸಂಪರ್ಕ ಕ್ರಾಂತಿಯಿಂದ ಆದ ಕೆಲವು ಒಳ್ಳೆಯ ಬೆಳವಣಿಗೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಹಳ ಉಪಯೋಗವಾಗಿದೆ ಎಂಬುದನ್ನು ಗಮನಿಸಬಹುದು.

ಮೊದಲೆಲ್ಲಾ ಕೇವಲ ಪತ್ರಿಕೆಗಳು, ನಿಯತಕಾಲಿಕೆಗಳು , ಒಂದಷ್ಟು ಸಾಂಸ್ಕೃತಿಕ ವೇದಿಕೆಗಳು, ಪ್ರಕಾಶನಗಳು ಮತ್ತು ಬೆರಳೆಣಿಕೆಯ ಬರಹಗಾರರು ಬಿಟ್ಟರೆ ಸಾಮಾನ್ಯರಿಂದ ಸಾಹಿತ್ಯ ದೂರವೇ ಇತ್ತು. ಸಿನಿಮಾ ಜನಪ್ರಿಯತೆಗೆ ಹೋಲಿಸಿದರೆ ಸಾಹಿತ್ಯ ಕೆಲವೇ ಜನರ ಆಸಕ್ತಿದಾಯಕ ಕ್ಷೇತ್ರವಾಗಿತ್ತು.

ಆದರೆ ಈಗ ನೋಡಿ ಸಾಮಾನ್ಯ ಜನರೂ ತಮ್ಮ ಭಾವನೆ ಅಭಿಪ್ರಾಯಗಳನ್ನು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಅದೂ ಕನ್ನಡದಲ್ಲಿಯೇ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಯುವ ಪ್ರತಿಭೆಗಳಂತೂ ಮೂಕವಿಸ್ಮಿತರಾಗುವಂತೆ ತಮ್ಮ ಬರಹಗಳನ್ನು ಮೂಡಿಸುತ್ತಿದ್ದಾರೆ. ಅವರ ಭಾಷೆ, ಕಲ್ಪನೆ, ನಿರೂಪಣೆ ಹಿಂದಿನ ಕನ್ನಡ ಸಾಹಿತ್ಯದ ಸ್ವರ್ಣಯುಗ ಮತ್ತೆ ಮರುಕಳಿಸುತ್ತಿದೆಯೇನೋ ಎಂಬ ಭಾವನೆ ಉಂಟುಮಾಡುತ್ತಿದೆ.
FACEBOOK /WATSAPP ಗ್ರೂಪ್ ಗಳ ಹೆಸರನ್ನೇ ಗಮನಿಸಿ, ಎಷ್ಟೊಂದು
ಆಕರ್ಷಕ, ಎಷ್ಟೊಂದು ಸುಂದರ, ಎಷ್ಟೊಂದು ಮುದ್ದು,

ಎಲ್ಲೋ ಆಗಾಗ ಕೆಲವೇ ಸಾಹಿತ್ಯಾಸಕ್ತ ಗುಂಪುಗಳಲ್ಲಿ ನಡೆಯುತ್ತಿದ್ದ ಕವಿಗೋಷ್ಟಿ, ವಿಚಾರ ಸಂಕಿರಣ, ಸಾಹಿತ್ಯ ಸ್ಪರ್ಧೆ ಈಗ ರಾಜ್ಯಾದ್ಯಂತ ಆಗಾಗ ನಡೆಯುತ್ತಲೇ ಇದೆ. ತಮ್ಮದೇ ಗ್ರೂಪ್ ಗಳಲ್ಲಿ ಸಾಹಿತ್ಯದ ಬಗ್ಗೆ ನಿರಂತರ ಚರ್ಚೆಗಳಾಗುತ್ತಲೇ ಇದೆ. ಅದರಲ್ಲೂ ಶಾಲಾ ಶಿಕ್ಷಕ/ಶಿಕ್ಷಕಿಯರು, ಮಾಹಿತಿ ತಂತ್ರಜ್ಞಾನದ ಆಧುನಿಕ ಜೀವನ ಶೈಲಿಯ ಹುಡುಗ/ಹುಡುಗಿಯರು, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು , ಇನ್ನೂ ಆಶ್ಚರ್ಯವೆಂದರೆ ಉರ್ದು ಮಾತೃಭಾಷೆಯ ಮುಸ್ಲಿಂಮರೂ ಕೂಡ ಕನ್ನಡದ ಅತ್ಯಂತ ಪ್ರತಿಭಾವಂತ ಬರಹಗಾರರಾಗಿ ಮೂಡಿಬರುತ್ತಿರುವುದು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಹೆಮ್ಮೆಪಡುವ ಸಂಗತಿ.

ಇದೇನು ಕಡಿಮೆ ಸಾಧನೆಯಲ್ಲ. ಹಳೆಯ ತಲೆಮಾರಿನ ಕೆಲವು ಬರಹಗಾರರು ಒಂದಷ್ಟು ಅಸೂಯೆ ಪಡುವಷ್ಟು, ತಳಮಳಗೊಳ್ಳುವಷ್ಟು ಇದು ಬೆಳೆದಿದೆ. ಬದಲಾವಣೆಯ ಸಂದರ್ಭಗಳಲ್ಲಿ ಇದು ಸಹಜ ಇರಲಿ. ಅದೂ ಅಲ್ಲದೆ ಸಾಹಿತ್ಯ ಪ್ರಕಾರದ ಅತ್ಯಂತ ಕಠಿಣ ರೂಪವಾದ ವಿಮರ್ಶಾ ವಿಭಾಗದಲ್ಲಿಯೂ ಹೊಸ ರೀತಿಯ ಚಿಂತನಾ ನೋಟ ಕಾಣುತ್ತಿರುವುದು ತುಂಬಾ ಸಂತೋಷ ಉಂಟುಮಾಡುತ್ತಿದೆ .

ಎಂದಿನಂತೆ ಒಂದಷ್ಟು ಉಢಾಪೆ, ಜೊಳ್ಳು ಇದ್ದದ್ದೇ. ಅದು ಅನುಭವದೊಂದಿಗೆ ಪಕ್ವವಾಗುತ್ತಾ ಸಾಗುತ್ತದೆ ಎಂದು ನಿರೀಕ್ಷಿಸೋಣ.

ಕೊನೆಯದಾಗಿ ಒಂದು ಕಾಡುವ ಕೊರತೆಯೆಂದರೆ ಕನ್ನಡ ಶಾಲೆಗಳ ಅಧೋಗತಿ ಮತ್ತು ಅಲ್ಲಿ ಕಲಿಯುವವರ ಸಂಖ್ಯೆ ಗಾಬರಿಯಾಗುವಷ್ಟು ಕಡಿಮೆಯಾಗಿರುವುದು. ಅದು ದೀರ್ಘಾವಧಿಯಲ್ಲಿ ಖಂಡಿತ ಕೆಟ್ಟ ಪರಿಣಾಮ ಬೀರುತ್ತದೆ. ಇದು ಆಡಳಿತಾಗಾರರ – ವ್ಯವಸ್ಥೆಯ ಲೋಪ.

ಅದು ಬಿಟ್ಟರೆ ಕನ್ನಡ ಭಾಷೆ ಮತ್ತು ಸಾಹಿತ್ಯ ಅತ್ಯಂತ ಉಲ್ಲಾಸದಾಯಕವಾಗಿದೆ.
ಸಾಹಿತ್ಯ ಮತ್ತು ಭಾಷೆಯ ಮೇಲಿನ ಪ್ರಭಾವದ ಬಗ್ಗೆ ಮಾತ್ರ ಇಲ್ಲಿ ಹೇಳಲಾಗಿದೆ. ಇದಲ್ಲದೆ ಸಾಮಾಜಿಕ ಜಾಲತಾಣ ಇಡೀ ವ್ಯವಸ್ಥೆಯ ಮೇಲೆ ಬೀರಿರುವ ಪ್ರಭಾವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಅದರಿಂದಾಗಿ ಆಗುತ್ತಿರುವ ಬದಲಾವಣೆಗಳನ್ನು ಕುರಿತು ಮುಂದೆ ಅಭಿಪ್ರಾಯ ವ್ಯಕ್ತಪಡಿಸುವೆ…..

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

3 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

6 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

7 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

18 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago