Categories: ಲೇಖನ

ಕನ್ನಡ ಭಾಷೆ ಮತ್ತು ಸಾಮಾಜಿಕ ಜಾಲತಾಣಗಳು…….

ಸಾಮಾಜಿಕ ಜಾಲತಾಣಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲೆ ಬೀರಿದ ಪ್ರಭಾವ…………..

ಸುಮಾರು 10/15 ವರ್ಷಗಳ ಹಿಂದೆ ಇದ್ದ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಆತಂಕ ಈಗ ಅಷ್ಟಾಗಿ ಕಾಣುತ್ತಿಲ್ಲ. ಫೇಸ್ ಬುಕ್, ವಾಟ್ಸ್ ಆಪ್, ಎಕ್ಸ್, ಇನ್ಸ್ಟಾಗ್ರಾಂ ಮುಂತಾದ ಜಾಲತಾಣಗಳ ಸಂಪರ್ಕ ಕ್ರಾಂತಿಯಿಂದ ಆದ ಕೆಲವು ಒಳ್ಳೆಯ ಬೆಳವಣಿಗೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಹಳ ಉಪಯೋಗವಾಗಿದೆ ಎಂಬುದನ್ನು ಗಮನಿಸಬಹುದು.

ಮೊದಲೆಲ್ಲಾ ಕೇವಲ ಪತ್ರಿಕೆಗಳು, ನಿಯತಕಾಲಿಕೆಗಳು , ಒಂದಷ್ಟು ಸಾಂಸ್ಕೃತಿಕ ವೇದಿಕೆಗಳು, ಪ್ರಕಾಶನಗಳು ಮತ್ತು ಬೆರಳೆಣಿಕೆಯ ಬರಹಗಾರರು ಬಿಟ್ಟರೆ ಸಾಮಾನ್ಯರಿಂದ ಸಾಹಿತ್ಯ ದೂರವೇ ಇತ್ತು. ಸಿನಿಮಾ ಜನಪ್ರಿಯತೆಗೆ ಹೋಲಿಸಿದರೆ ಸಾಹಿತ್ಯ ಕೆಲವೇ ಜನರ ಆಸಕ್ತಿದಾಯಕ ಕ್ಷೇತ್ರವಾಗಿತ್ತು.

ಆದರೆ ಈಗ ನೋಡಿ ಸಾಮಾನ್ಯ ಜನರೂ ತಮ್ಮ ಭಾವನೆ ಅಭಿಪ್ರಾಯಗಳನ್ನು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಅದೂ ಕನ್ನಡದಲ್ಲಿಯೇ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಯುವ ಪ್ರತಿಭೆಗಳಂತೂ ಮೂಕವಿಸ್ಮಿತರಾಗುವಂತೆ ತಮ್ಮ ಬರಹಗಳನ್ನು ಮೂಡಿಸುತ್ತಿದ್ದಾರೆ. ಅವರ ಭಾಷೆ, ಕಲ್ಪನೆ, ನಿರೂಪಣೆ ಹಿಂದಿನ ಕನ್ನಡ ಸಾಹಿತ್ಯದ ಸ್ವರ್ಣಯುಗ ಮತ್ತೆ ಮರುಕಳಿಸುತ್ತಿದೆಯೇನೋ ಎಂಬ ಭಾವನೆ ಉಂಟುಮಾಡುತ್ತಿದೆ.
FACEBOOK /WATSAPP ಗ್ರೂಪ್ ಗಳ ಹೆಸರನ್ನೇ ಗಮನಿಸಿ, ಎಷ್ಟೊಂದು
ಆಕರ್ಷಕ, ಎಷ್ಟೊಂದು ಸುಂದರ, ಎಷ್ಟೊಂದು ಮುದ್ದು,

ಎಲ್ಲೋ ಆಗಾಗ ಕೆಲವೇ ಸಾಹಿತ್ಯಾಸಕ್ತ ಗುಂಪುಗಳಲ್ಲಿ ನಡೆಯುತ್ತಿದ್ದ ಕವಿಗೋಷ್ಟಿ, ವಿಚಾರ ಸಂಕಿರಣ, ಸಾಹಿತ್ಯ ಸ್ಪರ್ಧೆ ಈಗ ರಾಜ್ಯಾದ್ಯಂತ ಆಗಾಗ ನಡೆಯುತ್ತಲೇ ಇದೆ. ತಮ್ಮದೇ ಗ್ರೂಪ್ ಗಳಲ್ಲಿ ಸಾಹಿತ್ಯದ ಬಗ್ಗೆ ನಿರಂತರ ಚರ್ಚೆಗಳಾಗುತ್ತಲೇ ಇದೆ. ಅದರಲ್ಲೂ ಶಾಲಾ ಶಿಕ್ಷಕ/ಶಿಕ್ಷಕಿಯರು, ಮಾಹಿತಿ ತಂತ್ರಜ್ಞಾನದ ಆಧುನಿಕ ಜೀವನ ಶೈಲಿಯ ಹುಡುಗ/ಹುಡುಗಿಯರು, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು , ಇನ್ನೂ ಆಶ್ಚರ್ಯವೆಂದರೆ ಉರ್ದು ಮಾತೃಭಾಷೆಯ ಮುಸ್ಲಿಂಮರೂ ಕೂಡ ಕನ್ನಡದ ಅತ್ಯಂತ ಪ್ರತಿಭಾವಂತ ಬರಹಗಾರರಾಗಿ ಮೂಡಿಬರುತ್ತಿರುವುದು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಹೆಮ್ಮೆಪಡುವ ಸಂಗತಿ.

ಇದೇನು ಕಡಿಮೆ ಸಾಧನೆಯಲ್ಲ. ಹಳೆಯ ತಲೆಮಾರಿನ ಕೆಲವು ಬರಹಗಾರರು ಒಂದಷ್ಟು ಅಸೂಯೆ ಪಡುವಷ್ಟು, ತಳಮಳಗೊಳ್ಳುವಷ್ಟು ಇದು ಬೆಳೆದಿದೆ. ಬದಲಾವಣೆಯ ಸಂದರ್ಭಗಳಲ್ಲಿ ಇದು ಸಹಜ ಇರಲಿ. ಅದೂ ಅಲ್ಲದೆ ಸಾಹಿತ್ಯ ಪ್ರಕಾರದ ಅತ್ಯಂತ ಕಠಿಣ ರೂಪವಾದ ವಿಮರ್ಶಾ ವಿಭಾಗದಲ್ಲಿಯೂ ಹೊಸ ರೀತಿಯ ಚಿಂತನಾ ನೋಟ ಕಾಣುತ್ತಿರುವುದು ತುಂಬಾ ಸಂತೋಷ ಉಂಟುಮಾಡುತ್ತಿದೆ .

ಎಂದಿನಂತೆ ಒಂದಷ್ಟು ಉಢಾಪೆ, ಜೊಳ್ಳು ಇದ್ದದ್ದೇ. ಅದು ಅನುಭವದೊಂದಿಗೆ ಪಕ್ವವಾಗುತ್ತಾ ಸಾಗುತ್ತದೆ ಎಂದು ನಿರೀಕ್ಷಿಸೋಣ.

ಕೊನೆಯದಾಗಿ ಒಂದು ಕಾಡುವ ಕೊರತೆಯೆಂದರೆ ಕನ್ನಡ ಶಾಲೆಗಳ ಅಧೋಗತಿ ಮತ್ತು ಅಲ್ಲಿ ಕಲಿಯುವವರ ಸಂಖ್ಯೆ ಗಾಬರಿಯಾಗುವಷ್ಟು ಕಡಿಮೆಯಾಗಿರುವುದು. ಅದು ದೀರ್ಘಾವಧಿಯಲ್ಲಿ ಖಂಡಿತ ಕೆಟ್ಟ ಪರಿಣಾಮ ಬೀರುತ್ತದೆ. ಇದು ಆಡಳಿತಾಗಾರರ – ವ್ಯವಸ್ಥೆಯ ಲೋಪ.

ಅದು ಬಿಟ್ಟರೆ ಕನ್ನಡ ಭಾಷೆ ಮತ್ತು ಸಾಹಿತ್ಯ ಅತ್ಯಂತ ಉಲ್ಲಾಸದಾಯಕವಾಗಿದೆ.
ಸಾಹಿತ್ಯ ಮತ್ತು ಭಾಷೆಯ ಮೇಲಿನ ಪ್ರಭಾವದ ಬಗ್ಗೆ ಮಾತ್ರ ಇಲ್ಲಿ ಹೇಳಲಾಗಿದೆ. ಇದಲ್ಲದೆ ಸಾಮಾಜಿಕ ಜಾಲತಾಣ ಇಡೀ ವ್ಯವಸ್ಥೆಯ ಮೇಲೆ ಬೀರಿರುವ ಪ್ರಭಾವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಅದರಿಂದಾಗಿ ಆಗುತ್ತಿರುವ ಬದಲಾವಣೆಗಳನ್ನು ಕುರಿತು ಮುಂದೆ ಅಭಿಪ್ರಾಯ ವ್ಯಕ್ತಪಡಿಸುವೆ…..

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

52 minutes ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

20 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago