ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ- ಜಿ.ಎಸ್.ಸ್ಮಿತಾ

ಭಾಷೆಯು ಸಾಂಸ್ಕೃತಿಕ ಪರಂಪರೆಯನ್ನು , ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಸಮಾರೋಪ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಸಮಾರೋಪ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮತ್ತು ಬೆಳವಣಿಗೆ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ. ಭವ್ಯ ಪರಂಪರೆಯುಳ್ಳ ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬ ಕನ್ನಡಿಗರು ಪ್ರೀತಿ ಬೆಳೆಸಿಕೊಳ್ಳಬೇಕಾಗಿರುವುದು ಅತ್ಯಗತ್ಯ. ಕನ್ನಡ ಭಾಷೆಯೂ ಕನ್ನಡಿಗರ ಸಂಸ್ಕೃತಿ ಮತ್ತು ಸ್ವಾಭಿಮಾನದ ಪ್ರತೀಕವಾಗಿದೆ ಎಂದರು.

ಕನ್ನಡ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮ ಕುರಿತು ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ದೊಡ್ಡಬಳ್ಳಾಪುರ ವಿವಿಧ ಶಾಲಾ ಕಾಲೇಜುಗಳಲ್ಲಿ ಮೂವತ್ತು ವರ್ಷಗಳಿಂದ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ ಕಾರ್ಯಕ್ರಮಗಳು ನಡೆಯುತ್ತಾ ಬರುತ್ತಿದೆ. ಈ ವರ್ಷ ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ಆಗಿರುವುದರಿಂದ ಶತಮಾನದ ಸಂಭ್ರಮವನ್ನು ದೊಡ್ಡಬಳ್ಳಾಪುರದಲ್ಲಿ ಆಚರಿಸಲಾಯಿತು. ಇದರ ಜೊತೆಗೆ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ‌ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಹ ನಡೆಸಲಾಯಿತು. ಈ ಸ್ಪರ್ಧಾ ಪರೀಕ್ಷೆಯಲ್ಲಿ 523 ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.

ಜವಾಹರ ನವೋದಯ ವಿದ್ಯಾಲಯ ಪ್ರಾಂಶುಪಾಲ ಟಿ.ಪಳನಿ ವೇಲು ಮಾತನಾಡಿ, ದೊಡ್ಡಬಳ್ಳಾಪುರ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಕನ್ನಡ ಸಪ್ತಾಹ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ. ದೊಡ್ಡಬಳ್ಳಾಪುರ ನವೋದಯ ವಿದ್ಯಾಲಯದ‌ ಆವರಣದಲ್ಲಿ ಕನ್ನಡ ಜ್ಞಾನಪೀಠ ಪುರಸ್ಕೃತರ ಪುತ್ಥಳಿಗಳನ್ನು ಅನಾವರಣ ಮಾಡುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗೆಗಿನ ಪ್ರೀತಿ ಮತ್ತು ಗೌರವ ಹೊಂದಿದೆ. ‌ ಕಳೆದ ವರ್ಷ 50 ಮಂದಿ ಕನ್ನಡ ನಾಡಿನ ಸಾಧಕರ ಮಾಹಿತಿಯನ್ನು ವಿದ್ಯಾರ್ಥಿಗಳು ಸಿದ್ದಪಡಿಸಿ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆ ಪಡೆದಿದ್ದರೂ ಎಂದರು.

ಸಮಾರಂಭದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್ ಮಂಗಟ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಆರ್.ವೀರಣ್ಣಗೌಡ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಹೋಬಳಿ ಘಟಕಗಳ ಪದಾಧಿಕಾರಿಗಳಾದ ಜಿ.ಸುರೇಶ್, ಅಂಜನಮೂರ್ತಿ, ಗಿರೀಶ್ ಬರಗೂರು, ಪ್ರತಿನಿಧಿಗಳಾದ ಅಣ್ಣಯ್ಯ, ವೆಂಕಟೇಶ್, ಶಿವಪ್ರಸಾದ್, ರಂಗಸ್ವಾಮಯ್ಯ, ಸಫೀರ್, ಜವಾಹರ ನವೋದಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕನ್ನಡ ಸಪ್ತಾಹ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ದೊಡ್ಡಬಳ್ಳಾಪುರ ಜವಾಹರ ವಿದ್ಯಾಲಯ ವಿದ್ಯಾರ್ಥಿಗಳೊಂದಿಗೆ ಮಧ್ಯಪ್ರದೇಶ ಅಲೀರಾಜ್ ಜವಾಹರ ನವೋದಯದ ವಿದ್ಯಾರ್ಥಿಗಳು ನಡೆಸಿಕೊಟ್ಟ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

6 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

6 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

9 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

11 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

12 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

13 hours ago