ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ- ಜಿ.ಎಸ್.ಸ್ಮಿತಾ

ಭಾಷೆಯು ಸಾಂಸ್ಕೃತಿಕ ಪರಂಪರೆಯನ್ನು , ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಸಮಾರೋಪ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಸಮಾರೋಪ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮತ್ತು ಬೆಳವಣಿಗೆ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ. ಭವ್ಯ ಪರಂಪರೆಯುಳ್ಳ ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬ ಕನ್ನಡಿಗರು ಪ್ರೀತಿ ಬೆಳೆಸಿಕೊಳ್ಳಬೇಕಾಗಿರುವುದು ಅತ್ಯಗತ್ಯ. ಕನ್ನಡ ಭಾಷೆಯೂ ಕನ್ನಡಿಗರ ಸಂಸ್ಕೃತಿ ಮತ್ತು ಸ್ವಾಭಿಮಾನದ ಪ್ರತೀಕವಾಗಿದೆ ಎಂದರು.

ಕನ್ನಡ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮ ಕುರಿತು ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ದೊಡ್ಡಬಳ್ಳಾಪುರ ವಿವಿಧ ಶಾಲಾ ಕಾಲೇಜುಗಳಲ್ಲಿ ಮೂವತ್ತು ವರ್ಷಗಳಿಂದ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ ಕಾರ್ಯಕ್ರಮಗಳು ನಡೆಯುತ್ತಾ ಬರುತ್ತಿದೆ. ಈ ವರ್ಷ ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ಆಗಿರುವುದರಿಂದ ಶತಮಾನದ ಸಂಭ್ರಮವನ್ನು ದೊಡ್ಡಬಳ್ಳಾಪುರದಲ್ಲಿ ಆಚರಿಸಲಾಯಿತು. ಇದರ ಜೊತೆಗೆ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ‌ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಹ ನಡೆಸಲಾಯಿತು. ಈ ಸ್ಪರ್ಧಾ ಪರೀಕ್ಷೆಯಲ್ಲಿ 523 ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.

ಜವಾಹರ ನವೋದಯ ವಿದ್ಯಾಲಯ ಪ್ರಾಂಶುಪಾಲ ಟಿ.ಪಳನಿ ವೇಲು ಮಾತನಾಡಿ, ದೊಡ್ಡಬಳ್ಳಾಪುರ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಕನ್ನಡ ಸಪ್ತಾಹ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ. ದೊಡ್ಡಬಳ್ಳಾಪುರ ನವೋದಯ ವಿದ್ಯಾಲಯದ‌ ಆವರಣದಲ್ಲಿ ಕನ್ನಡ ಜ್ಞಾನಪೀಠ ಪುರಸ್ಕೃತರ ಪುತ್ಥಳಿಗಳನ್ನು ಅನಾವರಣ ಮಾಡುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗೆಗಿನ ಪ್ರೀತಿ ಮತ್ತು ಗೌರವ ಹೊಂದಿದೆ. ‌ ಕಳೆದ ವರ್ಷ 50 ಮಂದಿ ಕನ್ನಡ ನಾಡಿನ ಸಾಧಕರ ಮಾಹಿತಿಯನ್ನು ವಿದ್ಯಾರ್ಥಿಗಳು ಸಿದ್ದಪಡಿಸಿ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆ ಪಡೆದಿದ್ದರೂ ಎಂದರು.

ಸಮಾರಂಭದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್ ಮಂಗಟ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಆರ್.ವೀರಣ್ಣಗೌಡ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಹೋಬಳಿ ಘಟಕಗಳ ಪದಾಧಿಕಾರಿಗಳಾದ ಜಿ.ಸುರೇಶ್, ಅಂಜನಮೂರ್ತಿ, ಗಿರೀಶ್ ಬರಗೂರು, ಪ್ರತಿನಿಧಿಗಳಾದ ಅಣ್ಣಯ್ಯ, ವೆಂಕಟೇಶ್, ಶಿವಪ್ರಸಾದ್, ರಂಗಸ್ವಾಮಯ್ಯ, ಸಫೀರ್, ಜವಾಹರ ನವೋದಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕನ್ನಡ ಸಪ್ತಾಹ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ದೊಡ್ಡಬಳ್ಳಾಪುರ ಜವಾಹರ ವಿದ್ಯಾಲಯ ವಿದ್ಯಾರ್ಥಿಗಳೊಂದಿಗೆ ಮಧ್ಯಪ್ರದೇಶ ಅಲೀರಾಜ್ ಜವಾಹರ ನವೋದಯದ ವಿದ್ಯಾರ್ಥಿಗಳು ನಡೆಸಿಕೊಟ್ಟ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

8 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

9 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

14 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago