ನಗರದ ತಾಲ್ಲೂಕು ಕಚೇರಿ ರಸ್ತೆಯಲ್ಲಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನ ಮ್ಯಾನೇಜರ್ ಕನ್ನಡದಲ್ಲಿ ವ್ಯವಹಾರಿಸದೆ, ದರ್ಪ ಮೆರೆದು ಬ್ಯಾಂಕಿನ ಗ್ರಾಹಕ ನೀಡಿದ ಚೆಕ್ ನ್ನು ಬಿಸಾಡಿ ಕನಿಷ್ಠ ಗೌರವದಿಂದ ನಡೆದುಕೊಳ್ಳದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರವೇ ( ಕನ್ನಡಿಗರ ಬಣ) ಅಧ್ಯಕ್ಷ ಚಂದ್ರಶೇಖರ್ ಬ್ಯಾಂಕ್ ಮುಂಭಾಗದ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಚಂದ್ರಶೇಖರ್, ಖುದ್ದು ನಾನೇ ಎರಡು ಲಕ್ಷ ರೂಪಾಯಿಯ ಚೆಕ್ ಡ್ರಾ ಮಾಡಿಕೊಳ್ಳಲು ಬ್ಯಾಂಕಿಗೆ ಬಂದೆ. ಬ್ಯಾಂಕಿನ ಮ್ಯಾನೇಜರ್ ಅವರು ಈ ಬ್ರಾಂಚ್ ನಲ್ಲಿ ಹಣ ಇಲ್ಲ. ನೀವು ಮತ್ತೊಂದು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಖೆಗೆ ಹೋಗಿ ಡ್ರಾ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸಿದರು. ಬಳಿಕ ನಾನು ಕನ್ನಡದಲ್ಲಿ ಮಾತನಾಡಿ ಎಂದು ಆಗ್ರಹಿಸಿದಾಗ ಕೈನಲ್ಲಿದ್ದ ಚೆಕ್ ನ್ನು ಬಿಸಾಡಿದ್ದಾರೆ. ಕನ್ನಡಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಹೀಗಾಗಿ ಕರವೇ ಪದಾಧಿಕಾರಿಗಳು ಬ್ಯಾಂಕ್ ನ ದುರಹಂಕಾರಿ ಸಿಬ್ಬಂದಿಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರದ ನಿಯಮಾನುಸಾರವೇ ಕನ್ನಡ ಭಾಷೆಯನ್ನು ಕಲಿತು ವ್ಯವಹಾರ ಮಾಡಬೇಕು. ಕನಿಷ್ಠ ಕನ್ನಡ ಕಲಿಯಲು ಆಸಕ್ತಿ ವಹಿಸಬೇಕು. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇಷ್ಟೆಲ್ಲಾ ರಗಳೆ ಮಾಡಿರುವುದಕ್ಕೆ ಮ್ಯಾನೇಜರ್
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದರು.
ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬ್ಯಾಂಕ್ ಮ್ಯಾನೇಜರ್ ಪ್ರತಿಭಟನಾ ನಿರತರೊಂದಿಗೆ ಕ್ಷಮೆಯಾಚನೆ ಮಾಡಿ ಒಂದೆರಡು ತಿಂಗಳಲ್ಲಿ ಕನ್ನಡ ಭಾಷೆ ಕಲಿಯುತ್ತೇನೆ ಎಂದು ತಿಳಿಸಿದರು. ಇದರಿಂದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.
ಈ ವೇಳೆ ಮುಖಂಡರಾದ ಚಂದ್ರಶೇಖರ್, ಅರವಿಂದ್, ಚೇತನ್ ಮತ್ತಿತರರು ಇದ್ದರು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…