ಕನ್ನಡ ಮಾತನಾಡದ ಬ್ಯಾಂಕ್ ಮ್ಯಾನೇಜರ್: ಸಿಡಿದೆದ್ದ ಕರವೇ(ಕನ್ನಡಿಗರ ಬಣ): ಬ್ಯಾಂಕ್ ಬಾಗಿಲಲ್ಲೇ ಕುಳಿತು‌ ಕನ್ನಡ ಮಾತನಾಡದ ಮ್ಯಾನೇಜರ್ ವಿರುದ್ಧ‌ ಕರವೇ ಪ್ರತಿಭಟನೆ: ಕನ್ನಡ ಕಲಿತು ಮಾತನಾಡುತ್ತೇನೆ ಎಂದ ಬ್ಯಾಂಕ್ ಮ್ಯಾನೇಜರ್

ನಗರದ ತಾಲ್ಲೂಕು ಕಚೇರಿ ರಸ್ತೆಯಲ್ಲಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನ ಮ್ಯಾನೇಜರ್ ಕನ್ನಡದಲ್ಲಿ ವ್ಯವಹಾರಿಸದೆ, ದರ್ಪ ಮೆರೆದು ಬ್ಯಾಂಕಿನ ಗ್ರಾಹಕ ನೀಡಿದ ಚೆಕ್ ನ್ನು ಬಿಸಾಡಿ ಕನಿಷ್ಠ ಗೌರವದಿಂದ ನಡೆದುಕೊಳ್ಳದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರವೇ ( ಕನ್ನಡಿಗರ ಬಣ) ಅಧ್ಯಕ್ಷ ಚಂದ್ರಶೇಖರ್ ಬ್ಯಾಂಕ್ ಮುಂಭಾಗದ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ್, ಖುದ್ದು ನಾನೇ ಎರಡು ಲಕ್ಷ ರೂಪಾಯಿಯ ಚೆಕ್ ಡ್ರಾ ಮಾಡಿಕೊಳ್ಳಲು ಬ್ಯಾಂಕಿಗೆ ಬಂದೆ. ಬ್ಯಾಂಕಿನ ಮ್ಯಾನೇಜರ್ ಅವರು ಈ ಬ್ರಾಂಚ್ ನಲ್ಲಿ ಹಣ ಇಲ್ಲ. ನೀವು ಮತ್ತೊಂದು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಖೆಗೆ ಹೋಗಿ ಡ್ರಾ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸಿದರು. ಬಳಿಕ ನಾನು ಕನ್ನಡದಲ್ಲಿ ಮಾತನಾಡಿ ಎಂದು ಆಗ್ರಹಿಸಿದಾಗ ಕೈನಲ್ಲಿದ್ದ ಚೆಕ್ ನ್ನು ಬಿಸಾಡಿದ್ದಾರೆ. ಕನ್ನಡಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಹೀಗಾಗಿ ಕರವೇ ಪದಾಧಿಕಾರಿಗಳು ಬ್ಯಾಂಕ್ ನ ದುರಹಂಕಾರಿ ಸಿಬ್ಬಂದಿಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರದ ನಿಯಮಾನುಸಾರವೇ ಕನ್ನಡ ಭಾಷೆಯನ್ನು ಕಲಿತು ವ್ಯವಹಾರ ಮಾಡಬೇಕು. ಕನಿಷ್ಠ ಕನ್ನಡ ಕಲಿಯಲು ಆಸಕ್ತಿ ವಹಿಸಬೇಕು. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇಷ್ಟೆಲ್ಲಾ ರಗಳೆ ಮಾಡಿರುವುದಕ್ಕೆ ಮ್ಯಾನೇಜರ್
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದರು.

ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬ್ಯಾಂಕ್ ಮ್ಯಾನೇಜರ್ ಪ್ರತಿಭಟನಾ ನಿರತರೊಂದಿಗೆ ಕ್ಷಮೆಯಾಚನೆ ಮಾಡಿ ಒಂದೆರಡು ತಿಂಗಳಲ್ಲಿ ಕನ್ನಡ ಭಾಷೆ ಕಲಿಯುತ್ತೇನೆ ಎಂದು ತಿಳಿಸಿದರು. ಇದರಿಂದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

ಈ ವೇಳೆ ಮುಖಂಡರಾದ ಚಂದ್ರಶೇಖರ್, ಅರವಿಂದ್, ಚೇತನ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

6 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

7 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

12 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

14 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

17 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

18 hours ago