ಕನ್ನಡ ಮಾತನಾಡದ ಬ್ಯಾಂಕ್ ಮ್ಯಾನೇಜರ್: ಸಿಡಿದೆದ್ದ ಕರವೇ(ಕನ್ನಡಿಗರ ಬಣ): ಬ್ಯಾಂಕ್ ಬಾಗಿಲಲ್ಲೇ ಕುಳಿತು‌ ಕನ್ನಡ ಮಾತನಾಡದ ಮ್ಯಾನೇಜರ್ ವಿರುದ್ಧ‌ ಕರವೇ ಪ್ರತಿಭಟನೆ: ಕನ್ನಡ ಕಲಿತು ಮಾತನಾಡುತ್ತೇನೆ ಎಂದ ಬ್ಯಾಂಕ್ ಮ್ಯಾನೇಜರ್

ನಗರದ ತಾಲ್ಲೂಕು ಕಚೇರಿ ರಸ್ತೆಯಲ್ಲಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನ ಮ್ಯಾನೇಜರ್ ಕನ್ನಡದಲ್ಲಿ ವ್ಯವಹಾರಿಸದೆ, ದರ್ಪ ಮೆರೆದು ಬ್ಯಾಂಕಿನ ಗ್ರಾಹಕ ನೀಡಿದ ಚೆಕ್ ನ್ನು ಬಿಸಾಡಿ ಕನಿಷ್ಠ ಗೌರವದಿಂದ ನಡೆದುಕೊಳ್ಳದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರವೇ ( ಕನ್ನಡಿಗರ ಬಣ) ಅಧ್ಯಕ್ಷ ಚಂದ್ರಶೇಖರ್ ಬ್ಯಾಂಕ್ ಮುಂಭಾಗದ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ್, ಖುದ್ದು ನಾನೇ ಎರಡು ಲಕ್ಷ ರೂಪಾಯಿಯ ಚೆಕ್ ಡ್ರಾ ಮಾಡಿಕೊಳ್ಳಲು ಬ್ಯಾಂಕಿಗೆ ಬಂದೆ. ಬ್ಯಾಂಕಿನ ಮ್ಯಾನೇಜರ್ ಅವರು ಈ ಬ್ರಾಂಚ್ ನಲ್ಲಿ ಹಣ ಇಲ್ಲ. ನೀವು ಮತ್ತೊಂದು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಖೆಗೆ ಹೋಗಿ ಡ್ರಾ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸಿದರು. ಬಳಿಕ ನಾನು ಕನ್ನಡದಲ್ಲಿ ಮಾತನಾಡಿ ಎಂದು ಆಗ್ರಹಿಸಿದಾಗ ಕೈನಲ್ಲಿದ್ದ ಚೆಕ್ ನ್ನು ಬಿಸಾಡಿದ್ದಾರೆ. ಕನ್ನಡಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಹೀಗಾಗಿ ಕರವೇ ಪದಾಧಿಕಾರಿಗಳು ಬ್ಯಾಂಕ್ ನ ದುರಹಂಕಾರಿ ಸಿಬ್ಬಂದಿಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರದ ನಿಯಮಾನುಸಾರವೇ ಕನ್ನಡ ಭಾಷೆಯನ್ನು ಕಲಿತು ವ್ಯವಹಾರ ಮಾಡಬೇಕು. ಕನಿಷ್ಠ ಕನ್ನಡ ಕಲಿಯಲು ಆಸಕ್ತಿ ವಹಿಸಬೇಕು. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇಷ್ಟೆಲ್ಲಾ ರಗಳೆ ಮಾಡಿರುವುದಕ್ಕೆ ಮ್ಯಾನೇಜರ್
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದರು.

ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬ್ಯಾಂಕ್ ಮ್ಯಾನೇಜರ್ ಪ್ರತಿಭಟನಾ ನಿರತರೊಂದಿಗೆ ಕ್ಷಮೆಯಾಚನೆ ಮಾಡಿ ಒಂದೆರಡು ತಿಂಗಳಲ್ಲಿ ಕನ್ನಡ ಭಾಷೆ ಕಲಿಯುತ್ತೇನೆ ಎಂದು ತಿಳಿಸಿದರು. ಇದರಿಂದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

ಈ ವೇಳೆ ಮುಖಂಡರಾದ ಚಂದ್ರಶೇಖರ್, ಅರವಿಂದ್, ಚೇತನ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

4 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

19 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

20 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago