ಕನ್ನಡ ಮಾತನಾಡದ ಬ್ಯಾಂಕ್ ಮ್ಯಾನೇಜರ್: ಸಿಡಿದೆದ್ದ ಕರವೇ(ಕನ್ನಡಿಗರ ಬಣ): ಬ್ಯಾಂಕ್ ಬಾಗಿಲಲ್ಲೇ ಕುಳಿತು‌ ಕನ್ನಡ ಮಾತನಾಡದ ಮ್ಯಾನೇಜರ್ ವಿರುದ್ಧ‌ ಕರವೇ ಪ್ರತಿಭಟನೆ: ಕನ್ನಡ ಕಲಿತು ಮಾತನಾಡುತ್ತೇನೆ ಎಂದ ಬ್ಯಾಂಕ್ ಮ್ಯಾನೇಜರ್

ನಗರದ ತಾಲ್ಲೂಕು ಕಚೇರಿ ರಸ್ತೆಯಲ್ಲಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನ ಮ್ಯಾನೇಜರ್ ಕನ್ನಡದಲ್ಲಿ ವ್ಯವಹಾರಿಸದೆ, ದರ್ಪ ಮೆರೆದು ಬ್ಯಾಂಕಿನ ಗ್ರಾಹಕ ನೀಡಿದ ಚೆಕ್ ನ್ನು ಬಿಸಾಡಿ ಕನಿಷ್ಠ ಗೌರವದಿಂದ ನಡೆದುಕೊಳ್ಳದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರವೇ ( ಕನ್ನಡಿಗರ ಬಣ) ಅಧ್ಯಕ್ಷ ಚಂದ್ರಶೇಖರ್ ಬ್ಯಾಂಕ್ ಮುಂಭಾಗದ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ್, ಖುದ್ದು ನಾನೇ ಎರಡು ಲಕ್ಷ ರೂಪಾಯಿಯ ಚೆಕ್ ಡ್ರಾ ಮಾಡಿಕೊಳ್ಳಲು ಬ್ಯಾಂಕಿಗೆ ಬಂದೆ. ಬ್ಯಾಂಕಿನ ಮ್ಯಾನೇಜರ್ ಅವರು ಈ ಬ್ರಾಂಚ್ ನಲ್ಲಿ ಹಣ ಇಲ್ಲ. ನೀವು ಮತ್ತೊಂದು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಖೆಗೆ ಹೋಗಿ ಡ್ರಾ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸಿದರು. ಬಳಿಕ ನಾನು ಕನ್ನಡದಲ್ಲಿ ಮಾತನಾಡಿ ಎಂದು ಆಗ್ರಹಿಸಿದಾಗ ಕೈನಲ್ಲಿದ್ದ ಚೆಕ್ ನ್ನು ಬಿಸಾಡಿದ್ದಾರೆ. ಕನ್ನಡಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಹೀಗಾಗಿ ಕರವೇ ಪದಾಧಿಕಾರಿಗಳು ಬ್ಯಾಂಕ್ ನ ದುರಹಂಕಾರಿ ಸಿಬ್ಬಂದಿಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರದ ನಿಯಮಾನುಸಾರವೇ ಕನ್ನಡ ಭಾಷೆಯನ್ನು ಕಲಿತು ವ್ಯವಹಾರ ಮಾಡಬೇಕು. ಕನಿಷ್ಠ ಕನ್ನಡ ಕಲಿಯಲು ಆಸಕ್ತಿ ವಹಿಸಬೇಕು. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇಷ್ಟೆಲ್ಲಾ ರಗಳೆ ಮಾಡಿರುವುದಕ್ಕೆ ಮ್ಯಾನೇಜರ್
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದರು.

ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬ್ಯಾಂಕ್ ಮ್ಯಾನೇಜರ್ ಪ್ರತಿಭಟನಾ ನಿರತರೊಂದಿಗೆ ಕ್ಷಮೆಯಾಚನೆ ಮಾಡಿ ಒಂದೆರಡು ತಿಂಗಳಲ್ಲಿ ಕನ್ನಡ ಭಾಷೆ ಕಲಿಯುತ್ತೇನೆ ಎಂದು ತಿಳಿಸಿದರು. ಇದರಿಂದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

ಈ ವೇಳೆ ಮುಖಂಡರಾದ ಚಂದ್ರಶೇಖರ್, ಅರವಿಂದ್, ಚೇತನ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

3 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

6 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago