ನಗರದ ತಾಲ್ಲೂಕು ಕಚೇರಿ ರಸ್ತೆಯಲ್ಲಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನ ಮ್ಯಾನೇಜರ್ ಕನ್ನಡದಲ್ಲಿ ವ್ಯವಹಾರಿಸದೆ, ದರ್ಪ ಮೆರೆದು ಬ್ಯಾಂಕಿನ ಗ್ರಾಹಕ ನೀಡಿದ ಚೆಕ್ ನ್ನು ಬಿಸಾಡಿ ಕನಿಷ್ಠ ಗೌರವದಿಂದ ನಡೆದುಕೊಳ್ಳದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರವೇ ( ಕನ್ನಡಿಗರ ಬಣ) ಅಧ್ಯಕ್ಷ ಚಂದ್ರಶೇಖರ್ ಬ್ಯಾಂಕ್ ಮುಂಭಾಗದ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಚಂದ್ರಶೇಖರ್, ಖುದ್ದು ನಾನೇ ಎರಡು ಲಕ್ಷ ರೂಪಾಯಿಯ ಚೆಕ್ ಡ್ರಾ ಮಾಡಿಕೊಳ್ಳಲು ಬ್ಯಾಂಕಿಗೆ ಬಂದೆ. ಬ್ಯಾಂಕಿನ ಮ್ಯಾನೇಜರ್ ಅವರು ಈ ಬ್ರಾಂಚ್ ನಲ್ಲಿ ಹಣ ಇಲ್ಲ. ನೀವು ಮತ್ತೊಂದು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಖೆಗೆ ಹೋಗಿ ಡ್ರಾ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸಿದರು. ಬಳಿಕ ನಾನು ಕನ್ನಡದಲ್ಲಿ ಮಾತನಾಡಿ ಎಂದು ಆಗ್ರಹಿಸಿದಾಗ ಕೈನಲ್ಲಿದ್ದ ಚೆಕ್ ನ್ನು ಬಿಸಾಡಿದ್ದಾರೆ. ಕನ್ನಡಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಹೀಗಾಗಿ ಕರವೇ ಪದಾಧಿಕಾರಿಗಳು ಬ್ಯಾಂಕ್ ನ ದುರಹಂಕಾರಿ ಸಿಬ್ಬಂದಿಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರದ ನಿಯಮಾನುಸಾರವೇ ಕನ್ನಡ ಭಾಷೆಯನ್ನು ಕಲಿತು ವ್ಯವಹಾರ ಮಾಡಬೇಕು. ಕನಿಷ್ಠ ಕನ್ನಡ ಕಲಿಯಲು ಆಸಕ್ತಿ ವಹಿಸಬೇಕು. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇಷ್ಟೆಲ್ಲಾ ರಗಳೆ ಮಾಡಿರುವುದಕ್ಕೆ ಮ್ಯಾನೇಜರ್
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದರು.
ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬ್ಯಾಂಕ್ ಮ್ಯಾನೇಜರ್ ಪ್ರತಿಭಟನಾ ನಿರತರೊಂದಿಗೆ ಕ್ಷಮೆಯಾಚನೆ ಮಾಡಿ ಒಂದೆರಡು ತಿಂಗಳಲ್ಲಿ ಕನ್ನಡ ಭಾಷೆ ಕಲಿಯುತ್ತೇನೆ ಎಂದು ತಿಳಿಸಿದರು. ಇದರಿಂದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.
ಈ ವೇಳೆ ಮುಖಂಡರಾದ ಚಂದ್ರಶೇಖರ್, ಅರವಿಂದ್, ಚೇತನ್ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…