ನಗರದ ತಾಲ್ಲೂಕು ಕಚೇರಿ ರಸ್ತೆಯಲ್ಲಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನ ಮ್ಯಾನೇಜರ್ ಕನ್ನಡದಲ್ಲಿ ವ್ಯವಹಾರಿಸದೆ, ದರ್ಪ ಮೆರೆದು ಬ್ಯಾಂಕಿನ ಗ್ರಾಹಕ ನೀಡಿದ ಚೆಕ್ ನ್ನು ಬಿಸಾಡಿ ಕನಿಷ್ಠ ಗೌರವದಿಂದ ನಡೆದುಕೊಳ್ಳದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರವೇ ( ಕನ್ನಡಿಗರ ಬಣ) ಅಧ್ಯಕ್ಷ ಚಂದ್ರಶೇಖರ್ ಬ್ಯಾಂಕ್ ಮುಂಭಾಗದ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಚಂದ್ರಶೇಖರ್, ಖುದ್ದು ನಾನೇ ಎರಡು ಲಕ್ಷ ರೂಪಾಯಿಯ ಚೆಕ್ ಡ್ರಾ ಮಾಡಿಕೊಳ್ಳಲು ಬ್ಯಾಂಕಿಗೆ ಬಂದೆ. ಬ್ಯಾಂಕಿನ ಮ್ಯಾನೇಜರ್ ಅವರು ಈ ಬ್ರಾಂಚ್ ನಲ್ಲಿ ಹಣ ಇಲ್ಲ. ನೀವು ಮತ್ತೊಂದು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಖೆಗೆ ಹೋಗಿ ಡ್ರಾ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸಿದರು. ಬಳಿಕ ನಾನು ಕನ್ನಡದಲ್ಲಿ ಮಾತನಾಡಿ ಎಂದು ಆಗ್ರಹಿಸಿದಾಗ ಕೈನಲ್ಲಿದ್ದ ಚೆಕ್ ನ್ನು ಬಿಸಾಡಿದ್ದಾರೆ. ಕನ್ನಡಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಹೀಗಾಗಿ ಕರವೇ ಪದಾಧಿಕಾರಿಗಳು ಬ್ಯಾಂಕ್ ನ ದುರಹಂಕಾರಿ ಸಿಬ್ಬಂದಿಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರದ ನಿಯಮಾನುಸಾರವೇ ಕನ್ನಡ ಭಾಷೆಯನ್ನು ಕಲಿತು ವ್ಯವಹಾರ ಮಾಡಬೇಕು. ಕನಿಷ್ಠ ಕನ್ನಡ ಕಲಿಯಲು ಆಸಕ್ತಿ ವಹಿಸಬೇಕು. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇಷ್ಟೆಲ್ಲಾ ರಗಳೆ ಮಾಡಿರುವುದಕ್ಕೆ ಮ್ಯಾನೇಜರ್
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದರು.
ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬ್ಯಾಂಕ್ ಮ್ಯಾನೇಜರ್ ಪ್ರತಿಭಟನಾ ನಿರತರೊಂದಿಗೆ ಕ್ಷಮೆಯಾಚನೆ ಮಾಡಿ ಒಂದೆರಡು ತಿಂಗಳಲ್ಲಿ ಕನ್ನಡ ಭಾಷೆ ಕಲಿಯುತ್ತೇನೆ ಎಂದು ತಿಳಿಸಿದರು. ಇದರಿಂದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.
ಈ ವೇಳೆ ಮುಖಂಡರಾದ ಚಂದ್ರಶೇಖರ್, ಅರವಿಂದ್, ಚೇತನ್ ಮತ್ತಿತರರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…