ನಗರದ ತಾಲ್ಲೂಕು ಕಚೇರಿ ರಸ್ತೆಯಲ್ಲಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನ ಮ್ಯಾನೇಜರ್ ಕನ್ನಡದಲ್ಲಿ ವ್ಯವಹಾರಿಸದೆ, ದರ್ಪ ಮೆರೆದು ಬ್ಯಾಂಕಿನ ಗ್ರಾಹಕ ನೀಡಿದ ಚೆಕ್ ನ್ನು ಬಿಸಾಡಿ ಕನಿಷ್ಠ ಗೌರವದಿಂದ ನಡೆದುಕೊಳ್ಳದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರವೇ ( ಕನ್ನಡಿಗರ ಬಣ) ಅಧ್ಯಕ್ಷ ಚಂದ್ರಶೇಖರ್ ಬ್ಯಾಂಕ್ ಮುಂಭಾಗದ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಚಂದ್ರಶೇಖರ್, ಖುದ್ದು ನಾನೇ ಎರಡು ಲಕ್ಷ ರೂಪಾಯಿಯ ಚೆಕ್ ಡ್ರಾ ಮಾಡಿಕೊಳ್ಳಲು ಬ್ಯಾಂಕಿಗೆ ಬಂದೆ. ಬ್ಯಾಂಕಿನ ಮ್ಯಾನೇಜರ್ ಅವರು ಈ ಬ್ರಾಂಚ್ ನಲ್ಲಿ ಹಣ ಇಲ್ಲ. ನೀವು ಮತ್ತೊಂದು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಖೆಗೆ ಹೋಗಿ ಡ್ರಾ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸಿದರು. ಬಳಿಕ ನಾನು ಕನ್ನಡದಲ್ಲಿ ಮಾತನಾಡಿ ಎಂದು ಆಗ್ರಹಿಸಿದಾಗ ಕೈನಲ್ಲಿದ್ದ ಚೆಕ್ ನ್ನು ಬಿಸಾಡಿದ್ದಾರೆ. ಕನ್ನಡಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಹೀಗಾಗಿ ಕರವೇ ಪದಾಧಿಕಾರಿಗಳು ಬ್ಯಾಂಕ್ ನ ದುರಹಂಕಾರಿ ಸಿಬ್ಬಂದಿಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರದ ನಿಯಮಾನುಸಾರವೇ ಕನ್ನಡ ಭಾಷೆಯನ್ನು ಕಲಿತು ವ್ಯವಹಾರ ಮಾಡಬೇಕು. ಕನಿಷ್ಠ ಕನ್ನಡ ಕಲಿಯಲು ಆಸಕ್ತಿ ವಹಿಸಬೇಕು. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇಷ್ಟೆಲ್ಲಾ ರಗಳೆ ಮಾಡಿರುವುದಕ್ಕೆ ಮ್ಯಾನೇಜರ್
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದರು.
ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬ್ಯಾಂಕ್ ಮ್ಯಾನೇಜರ್ ಪ್ರತಿಭಟನಾ ನಿರತರೊಂದಿಗೆ ಕ್ಷಮೆಯಾಚನೆ ಮಾಡಿ ಒಂದೆರಡು ತಿಂಗಳಲ್ಲಿ ಕನ್ನಡ ಭಾಷೆ ಕಲಿಯುತ್ತೇನೆ ಎಂದು ತಿಳಿಸಿದರು. ಇದರಿಂದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.
ಈ ವೇಳೆ ಮುಖಂಡರಾದ ಚಂದ್ರಶೇಖರ್, ಅರವಿಂದ್, ಚೇತನ್ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…